ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಂಪುಟ ನೂತನ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಿ ರಾಜಭವನಕ್ಕೆ ಕಳುಹಿಸಿದ್ದ ಪಟ್ಟಿಗೆ ಮಂಗಳವಾರ ಸಂಜೆ ರಾಜ್ಯಪಾಲ ವಜುಭಾಯಿ ವಾಲಾ ಅವರು ಅಂಕಿತ ಹಾಕಿದ್ದಾರೆ.
13 ನೂತನ ಶಾಸಕರಿಗೆ ಖಾತೆ ಹಂಚಿಕೆ ಮಾಡಿರುವ ಸಿಎಂ ಸಿದ್ದರಾಮಯ್ಯ ವಸತಿ, ವಾರ್ತಾ ಇಲಾಖೆ ಖಾತೆಯನ್ನು ತಮ್ಮ ಬಳಿಯೇ ಉಳಿಸಿಕೊಂಡಿದ್ದಾರೆ.
ಸಚಿವರಿಗೆ ಹಂಚಿಕೆಯಾದ ಖಾತೆಗಳ ವಿವರ:
ರಮೇಶ್ ಕುಮಾರ್: ಆರೋಗ್ಯ ಖಾತೆ
ಕಾಗೋಡು ತಿಮ್ಮಪ್ಪ: ಕಂದಾಯ ಖಾತೆ
ಯುಟಿ ಖಾದರ್: ಆಹಾರ ಮತ್ತು ನಾಗರಿಕ ಸರಬರಾಜು
ರುದ್ರಪ್ಪ ಲಮಾಣಿ: ಮುಜರಾಯಿ, ಜವಳಿ
ಕಾನೂನು ಸಚಿವ ಟಿಬಿ ಜಯಚಂದ್ರ: ಸಣ್ಣ ನೀರಾವರಿ( ಹೆಚ್ಚುವರಿ ಜವಾಬ್ದಾರಿ)
ಆರ್. ವಿ. ದೇಶಪಾಂಡೆ: ಕೈಗಾರಿಕೆ, ಮೂಲಸೌಕರ್ಯ ಖಾತೆ
ರೋಶನ್ ಬೇಗ್: ನಗರಾಭಿವೃದ್ಧಿ ಹಾಗೂ ಹಜ್ ಖಾತೆ
ಈಶ್ವರ ಖಡ್ರೆ : ಪೌರಾಡಳಿತ ಹಾಗೂ ಸಾರ್ವಜನಿಕ ಉದ್ದಿಮೆ
ಪ್ರಿಯಾಂಕ್ ಖರ್ಗೆ: ಐಟಿ ಬಿಟಿ ಮತ್ತು ಪ್ರವಾಸೋದ್ಯಮ
ಬಸವರಾಜ ರಾಯರೆಡ್ಡಿ: ಉನ್ನತ ಶಿಕ್ಷಣ
ಎಚ್.ವೈ. ಮೇಟಿ : ಅಬಕಾರಿ
ತನ್ವೀರ್ ಸೇಠ್: ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ, ಅಲ್ಪಸಂಖ್ಯಾತ ಖಾತೆ ಹಾಗೂ ವಕ್ಫ್