ಮೈಸೂರು ಜಿಲ್ಲೆಯ ನಂಜನಗೂಡಿನ ದೇವನೂರು ಮಹಾದೇವ ಅವರು, ನಂಜನಗೂಡು ಮತ್ತು ಮೈಸೂರಿನಲ್ಲಿ ವಿದ್ಯಾಭ್ಯಾಸ ಮುಗಿಸಿ ಕೆಲಕಾಲ ಅಧ್ಯಾಪಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಕೃಷಿಯಲ್ಲಿ ವಿಶೇಷವಾದ ಆಸಕ್ತಿ ಹೊಂದಿರುವ ದೇವನೂರು ಮಹಾದೇವ ಅವರ ಕಿರು ಕಾದಂಬರಿ ‘ಒಡಲಾಳ’ ಕೃತಿಯನ್ನು ಕೋಲ್ಕತದ ಭಾರತೀಯ ಪರಿಷತ್ 1984ರಲ್ಲಿ ಉತ್ತಮ ಶೃಜನಶೀಲ ಕೃತಿ ಎಂದು ಗೌರವಿಸಿದೆ. 1991ರಲ್ಲಿ ಅವರ ‘ಕುಸುಮಬಾಲೆ’ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಅಲ್ಲದೆ, ಕರ್ನಾಟಕ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ.