ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರ ಪೈಕಿ ಏಳು ಮಂದಿಯ ನಿಯೋಗವೊಂದು ಇಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿ ಮನವಿ ಮಾಡಲು ಮುಂದಾಗಿದ್ದಾರೆ. ಆದರೆ ಪ್ರಧಾನಿ ಭೇಟಿಗೆ ಅವಕಾಶ ನೀಡಿಲ್ಲ. ಹೀಗಾಗಿ ಪ್ರಧಾನಿ ಕಚೇರಿ ಸಿಬ್ಬಂದಿ ಕೈಗೆ ಮನವಿ ಪತ್ರ ನೀಡಿ, ವಾಪಸ್ ಪೊಲೀಸ್ ಜೀಪ್ ನಲ್ಲಿ ಬರುತ್ತಿದ್ದ ವೇಳೆ ಓರ್ವ ರೈತ ಜೀಪ್ ನಿಂದ ಜಿಗಿದು ರಸ್ತೆಯಲ್ಲೇ ನಗ್ನವಾಗಿದ್ದಾನೆ. ಅದನ್ನು ಮತ್ತೆ ಇಬ್ಬರು ರೈತರು ಜೀಪ್ ಜಿಗಿದು ರಸ್ತೆಯಲ್ಲಿ ಬೆತ್ತಲೆಯಾಗಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ರಸ್ತೆಯಲ್ಲಿ ಓಡುತ್ತಿರುವ ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರವಾಗಿದೆ.