ಜಲಿಯನ್ ವಾಲಾ ಭಾಗ್ ಹತ್ಯಾಕಾಂಡದ ಹುತಾತ್ಮರನ್ನು ಮರೆಯಲಾಗದು: ಮೋದಿ

ಪ್ರಧಾನಿ ನರೇಂದ್ರ ಮೋದಿ ಪಂಜಾಬ್ ನ ಜಲಿಯನ್ ವಾಲಾ ಭಾಗ್ ಹತ್ಯಾಕಾಂಡದ ಹುತಾತ್ಮರಿಗೆ ಗುರುವಾರ ಗೌರವ ಸಲ್ಲಿಸಿದ್ದು, ಅವರ ಧೀರೋದ್ಧಾತತೆಯನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ
ಜಲಿಯನ್ ವಾಲಾಭಾಗ್ ಹತ್ಯಾಕಾಂಡದ ಬಗೆಗಿನ ಒಂದು ಚಿತ್ರ
ಜಲಿಯನ್ ವಾಲಾಭಾಗ್ ಹತ್ಯಾಕಾಂಡದ ಬಗೆಗಿನ ಒಂದು ಚಿತ್ರ
Updated on
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಪಂಜಾಬ್ ನ ಜಲಿಯನ್ ವಾಲಾ ಭಾಗ್ ಹತ್ಯಾಕಾಂಡದ ಹುತಾತ್ಮರಿಗೆ ಗುರುವಾರ ಗೌರವ ಸಲ್ಲಿಸಿದ್ದು, ಅವರ ಧೀರೋದ್ಧಾತತೆಯನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದಿದ್ದಾರೆ. 
"ಜಲಿಯನ್ ವಾಲಾಭಾಗ್ ಹತ್ಯಾಕಾಂಡದ ಹುತಾತ್ಮರಿಗೆ ಈ ಮೂಲಕ ನಮಸ್ಕಾರ ಸಲ್ಲಿಸುತ್ತಿದ್ದೇನೆ. ಅವರ ಧೈರ್ಯ ಮತ್ತು ಧೀರೋದ್ಧಾತತೆಯನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ" ಎಂದು ಮೋದಿ ಟ್ವೀಟ್ ಮಾಡಿದ್ದಾರೆ. 
೧೩, ಏಪ್ರಿಲ್ ೧೯೧೯ ರಲ್ಲಿ ಅಮೃತಸರದ ಜಲಿಯನ್ ವಾಲಾಭಾಗ್ ನಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಿದ್ದ ಗುಂಪಿನ ಮೇಲೆ ಬ್ರಿಟಿಷ್ ಇಂಡಿಯನ್ ಆರ್ಮಿ ಗುಂಡಿನ ಮಳೆಗರೆದು ಮಾರಣಹೋಮಕ್ಕೆ ಕಾರಣವಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com