ಈ ಹಿಂದೆ ನಡೆದ ವಿಚಾರಣೆಯಲ್ಲಿ ಅಮರನಾಥ್ ಗುಹೆಯೂ ಸೇರಿದಂತೆ ಸುತ್ತಮುತ್ತಲ ಪ್ರದೇಶವನ್ನು ಶಬ್ದ ರಹಿತ ಪ್ರದೇಶ ಎಂದು ಘೋಷಣೆ ಮಾಡುವ ಸಂಬಂಧ ನಿರ್ಧಾರ ಕೈಗೊಳ್ಳುವುದಾಗಿ ಎನ್ ಜಿಟಿ ಹೇಳಿತ್ತು. ಕಾಶ್ಮೀರದಲ್ಲಿ ಚಳಿಗಾಲ ಆರಂಭವಾಗಿದ್ದು, ಈಗಾಗಲೇ ಮೊದಲ ಹಂತದ ಹಿಮಮಳೆ ಕೂಡ ಆರಂಭವಾಗಿದೆ. ಹೀಗಾಗಿ ಅಮರನಾಥ್ ಗುಹೆಯ ಸುತ್ತಮುತ್ತ ಭಾರಿ ಪ್ರಮಾಣದ ಹಿಮ ಶೇಖರಣೆಯಾಗಿದೆ. ಶಬ್ದ ಮಾಡುವುದರಿಂದ ಅಲ್ಲಿನ ಮಂಜುಗೆಡ್ಡೆಗಳ ಮೇಲೆ ಪರಿಣಾಮವಾಗಿ ಅವು ಜಾರುವ ಅಥವಾ ಹಿಮಪಾತವಾಗುವ ಸಾಧ್ಯತೆ ಇದೆ ಎಂದು ಎನ್ ಜಿಟಿ ಅಭಿಪ್ರಾಯಪಟ್ಟಿತ್ತು. ಅಲ್ಲದೆ ಪವಿತ್ರ ಗುಹೆಯನ್ನು ಶಬ್ದರಹಿತ ಪ್ರದೇಶವಾಗಿ ಘೋಷಣೆ ಮಾಡುವ ಇಂಗಿತ ವ್ಯಕ್ತಪಡಿಸಿತ್ತು.