ಚೆನ್ನೈ: ತಮಿಳುನಾಡು ಆಡಳಿತರೂಢ ಎಐಎಡಿಎಂಕೆ ಪಕ್ಷದಲ್ಲಿನ ರಾಜಕೀಯ ಚಟುವಟಿಕೆ ರಾಜಭವನಕ್ಕೆ ಸ್ಥಳಾಂತರಗೊಂಡಿದ್ದು, ಪಕ್ಷದ ಪ್ರಧಾನ ಕಾರ್ಯದರ್ಶಿ ಹಾಗೂ ನಿಯೋಜಿತ ಮುಖ್ಯಮಂತ್ರಿ ಶಶಿಕಲಾ ನಟರಾಜನ್ ಅವರು ಗುರುವಾರ ತಮಿಳುನಾಡು ಉಸ್ತುವಾರಿ ರಾಜ್ಯಪಾಲ ಸಿ.ಎಚ್.ವಿದ್ಯಾಸಾಗರ್ ರಾವ್ ಅವರನ್ನು ಭೇಟಿ ಮಾಡಿ, ಸರ್ಕಾರ ರಚನೆಯ ಹಕ್ಕು ಮಂಡಿಸಿದ್ದಾರೆ.