ಕಳೆದ ಬುಧವಾರ ಪಕ್ಷದ ಪ್ರಧಾನ ಕಚೇರಿಯಲ್ಲಿ ಎಲ್ಲಾ ಶಾಸಕರು ಸೇರಿದ್ದೇವು. ಅಲ್ಲಿಂದ ಒಂದು ಜೊತೆ ಬಟ್ಟೆ ತೆಗೆದುಕೊಳ್ಳುವುದಕ್ಕಾಗಿ ಶಾಸಕರ ಭವನಕ್ಕೆ ಬಸ್ ನಲ್ಲಿ ಕರೆದೊಯ್ಯಲಾಯಿತು. ಬಳಿಕ ಹಿರಿಯ ನಾಯಕ, ಮಾಜಿ ಸಚಿವ ಎಡಪ್ಪಡಿ ಪಳನಿಸಾಮಿ ಅವರ ನಿವಾಸಕ್ಕೆ ಕರೆದೊಯ್ದು ಖಾಲಿ ಪೇಪರ್ ಮೇಲೆ ಸಹಿ ಮಾಡಿಸಿಕೊಂಡು, ನಿಗೂಢ ಸ್ಥಳಕ್ಕೆ ಕರೆದೊಯ್ದರು ಎಂದು ಶಣ್ಮುಗನಾಥನ್ ಅವರು ಆರೋಪಿಸಿದ್ದಾರೆ.