ಲಖನೌ: ಉತ್ತರಪ್ರದೇಶದ ವಾರಣಾಸಿಯಲ್ಲಿ ಶುಕ್ರವಾರ ಜರುಗಬೇಕಿದ್ದ ಬಹುನಿರೀಕ್ಷಿತ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮತ್ತು ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರ ಜಂಟಿ ರೋಡ್ ಶೋ ರದ್ದಾಗಿದೆ. ದೀನರ ಸಂತ ಗುರು ರವಿದಾಸ್ ಅವರ ಜನ್ಮದಿನದ ಪ್ರಯುಕ್ತ ಈ ಕಾರ್ಯಕ್ರಮ ಬದಲಾಗಿದೆ. ವಿಧಾನಸಭಾ ಚುನಾವಣೆಗೆ ವಾರಣಾಸಿಯಲ್ಲಿ ಇಂದು ಈ ಇಬ್ಬರೂ ನಾಯಕರು ಒಟ್ಟಿಗೆ ಪ್ರಚಾರ ನಡೆಸಬೇಕಿತ್ತು.