ವಿಧಾನಸಭೆಯಲ್ಲಿ ಪಶುಸಂಗೋಪನೆ ಸಚಿವ ಎ. ಮಂಜು ಅವರು ಪ್ರಾಣಿಗಳ ಹಿಂಸೆ ತಡೆ ತಿದ್ದುಪಡಿ ಕಾಯ್ದೆಯನ್ನು ಮಂಡಿಸಿದ್ದು ಎಲ್ಲಾ ಪಕ್ಷದ ಶಾಸಕರು ಪಕ್ಷಾತೀತವಾಗಿ ಬೆಂಬಲ ನೀಡಿದ್ದರಿಂದ ಮಸೂದೆ ಅಂಗೀಕಾರಗೊಂಡಿದೆ. ಈ ಮೂಲಕ ಕಂಬಳ ಕ್ರೀಡೆ ಮತ್ತು ಎತ್ತಿನಗಾಡಿ ಓಟಕ್ಕೆ ಕಾನೂನು ಬಲ ಸಿಕ್ಕಿದೆ. 1960ರಲ್ಲಿ ಜಾರಿಗೆ ಬಂದ ಪ್ರಾಣಿ ಹಿಂಸೆ ತಡೆ ಕಾಯ್ದೆಗೆ ಈ ಮೂಲಕ ತಿದ್ದುಪಡಿ ತರಲಾಗಿದೆ.