ಮೆಗಾಸ್ಟಾರ್ ಚಿರಂಜೀವಿ ಅವರ ಕಿರಿಯ ಸಹೋದರ ರಾಜಕೀಯದಲ್ಲಿ ಸಕ್ರಿಯರಾಗಲು ಸನ್ನದ್ಧರಾಗುತ್ತಿದ್ದಾರೆ. ಕಳೆದು ಕೆಲವು ತಿಂಗಳುಗಳಿಂದ ಸರಣಿ ಸಭೆಗಳನ್ನುದ್ದೇಶಿಸಿ ಮಾತನಾಡಿರುವ ಪವನ್, ದೇಶಪ್ರೇಮ, ಗೋಮಾಂಸ ನಿಷೇಧ, ನೋಟು ಹಿಂಪಡೆತ ನಿರ್ಧಾರ ಮತ್ತು ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ಸಂಶೋಧಕ ರೋಹಿತ್ ವೇಮುಲಾ ಆತ್ಮಹತ್ಯೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಬಿಜೆಪಿ ಪಕ್ಷದ ವಿರುದ್ಧ ತೀವ್ರವಾಗಿ ಹರಿಹಾಯ್ದಿದ್ದಾರೆ.