ನಿಷೇಧ ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ದೀಪಕ್ ಮಿಶ್ರ ನೇತೃತ್ವದ ತ್ರಿಸದಸ್ಯ ಪೀಠ, ಧಾರ್ಮಿಕ ಆಚರಣೆಯ ಸಂಪ್ರದಾಯದ ಬಗ್ಗೆ ಸಂವಿಧಾನದ ಅಡಿಯಲ್ಲೇ ನಿರ್ಧಾರ ಕೈಗೊಳ್ಳಬೇಕಾಗಿದೆ. ಕಾನೂನು, ಧರ್ಮ ಹಾಗೂ ಧಾರ್ಮಿಕತೆ ವಿವಿಧ ಆಯಾಮಗಳಾಗಿವೆ. ದೇವರು, ಸಂಪ್ರದಾಯ ನಂಬಿಕೆಯ ವಿಷಯವಾಗಿದೆ. ಆದರೆ ಸಾಂವಿಧಾನಿಕ ಪ್ರಶ್ನೆಗಳನ್ನು ನಾವು ನಿರ್ಧರಿಸಬೇಕಾಗಿದೆ ಎಂದು ಅಭಿಪ್ರಾಯವ್ಯಕ್ತಪಡಿಸಿದೆ.