ದೆಹಲಿಯ ರಮ್ಜಾಸ್ ಕಾಲೇಜಿನ ಕಾರ್ಯಕ್ರಮವೊಂದಕ್ಕೆ ಜೆಎನ್ ಯು ವಿದ್ಯಾರ್ಥಿ ಉಮರ್ ಖಾಲಿದ್ ನನ್ನು ಆಹ್ನಾನಿಸಿದ್ದಕ್ಕೆ ವಿರೋಧ ವ್ಯಕ್ತಪಡಿಸಿ ಎಬಿವಿಪಿ ಕಾರ್ಯಕರ್ತರು ಫೆ.24 ರಂದು ವಿಶ್ವವಿದ್ಯಾಲಯದ ಕ್ಯಾಂಪಸ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಇದಕ್ಕೆ ಪ್ರತಿಯಾಗಿ ಎಸ್ಎಫ್ಐ ಕಾರ್ಯಕರ್ತರು ಎಬಿವಿಪಿ ವಿರುದ್ಧ ಪೋಸ್ಟರ್ ಗಳನ್ನು ವಿವಿಯ ಆವರಣದಲ್ಲಿ ಅಂಟಿಸಿದ್ದರು. ಈ ಪೋಸ್ಟರ್ ಗಳಿಗೆ ಎಬಿವಿಪಿ ವಿರೋಧ ವ್ಯಕ್ತಪಡಿಸಿತ್ತು. ನಂತರ ಎರಡೂ ಸಂಘಟನೆಗಳ ಕಾರ್ಯಕರ್ತರ ನಡುವೆ ಘರ್ಷಣೆ ಏರ್ಪಟ್ಟು, ಕೆಲ ಕಾಲ ವಿವಿಯ ಆವರಣದಲ್ಲಿ ಆತಂಕ ಸೃಷ್ಟಿಯಾಗಿತ್ತು.