ಸೈನಿಕ ಕಲ್ಯಾಣ ನಿಧಿಗೆ ಪ್ರತಿ ವರ್ಷ ಒಟ್ಟು 80 ಕೋಟಿ ರುಪಾಯಿ ಸಂಗ್ರಹವಾಗಲಿದ್ದು, ಮುಖ್ಯಮಂತ್ರಿ ಹಾಗೂ ಸಚಿವರು ಪ್ರತಿ ವರ್ಷ ತಲಾ 25 ಸಾವಿರ ರುಪಾಯಿ, ಶಾಸಕರು, ವಿಧಾನ ಪರಿಷತ್ ಸದಸ್ಯರು ಮತ್ತು ಸಂಸದರು ತಲಾ 10 ಸಾವಿರ ರುಪಾಯಿಯನ್ನು ಸೈನಿಕ ಕಲ್ಯಾಣ ನಿಧಿಗೆ ನೀಡಲಿದ್ದಾರೆ ಎಂದು ಚಂದ್ರಶೇಖರ್ ರಾವ್ ಅವರು ತಿಳಿಸಿದ್ದಾರೆ. ಅಲ್ಲದೆ ರಾಜ್ಯ ಸರ್ಕಾರದ ನೌಕರರೂ ಸಹ ಪ್ರತಿ ವರ್ಷ ತಮ್ಮ ಒಂದು ದಿನದ ವೇತನವನ್ನು ಸೈನಿಕ ಕಲ್ಯಾಣ ನಿಧಿಗೆ ನೀಡಲಿದ್ದಾರೆ ಎಂದು ಹೇಳಿದ್ದಾರೆ.