ಬೆಂಗಳೂರು: ಚಾಮರಾಜನಗರ ನೂತನ ಜಿಲ್ಲಾ ಉಸ್ತುವಾರಿ ಸಚಿವರಾಗಿ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಅವರನ್ನು ನೇಮಕ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಆದೇಶ ಹೊರಡಿಸಿದ್ದಾರೆ.
ಎಚ್ ಎಸ್ ಮಹದೇವಪ್ರಸಾದ್ ಅವರ ಹಠಾತ್ ನಿಧನದಿಂದಾಗಿ ತೆರವಾಗಿದ್ದ ಚಾಮರಾಜನಗರದ ಉಸ್ತುವಾರಿಯನ್ನು ಸಿಎಂ ಯು.ಟಿ.ಖಾದರ್ ಅವರಿಗೆ ನೀಡಿದ್ದಾರೆ.
ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಸಕ್ಕರೆ ಹಾಗೂ ಸಹಕಾರಿ ಸಚಿವ ಎಚ್.ಎಸ್.ಮಹದೇವ ಪ್ರಸಾದ್ ಅವರು ಜನವರಿ 3ರಂದು ಚಿಕ್ಕಮಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾದರು.