ಜಲ್ಲಿಕಟ್ಟು ನಿಷೇಧ ತೆರವುಗೊಳಿಸುವ ಸಂಬಂಧ ರಾಜ್ಯ ಸರ್ಕಾರ ಸುಗ್ರೀವಾಜ್ಞೆಯ ಕರಡು ಪ್ರತಿಯನ್ನು ಗೃಹ ಸಚಿವಾಲಯಕ್ಕೆ ಕಳುಹಿಸಲಾಗಿದ್ದು, ಗೃಹ ಸಚಿವಾಲಯ, ಕಾನೂನು ಮತ್ತು ಪರಿಸರ, ಅರಣ್ಯ ಮತ್ತು ಹವಮಾನ ಸಚಿವಾಲಯಗಳಿಂದ ಒಪ್ಪಿಗೆ ಪಡೆದ ನಂತರ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಸಹಿಗೆ ಕಳುಹಿಸಲಾಗುತ್ತದೆ ಎಂದು ತಮಿಳುನಾಡು ಸಿಎಂ ತಿಳಿಸಿದ್ದಾರೆ.