ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಸ್ಥೆಯ (ಡಿಡಿಸಿಎ) ಹಗರಣದಲ್ಲಿ ಜೇಟ್ಲಿ ಕೈವಾಡವಿದೆ ಎಂದು ಹೇಳಿ ತಮ್ಮ ಗೌರವಕ್ಕೆ ಧಕ್ಕೆ ತಂದಿದ್ದಾರೆ ಎಂದು ದೂರಿ ಆಮ್ ಆದ್ಮಿ ಪಕ್ಷದ ಮುಖಂಡರಾದ ಅರವಿಂದ್ ಕೇಜ್ರಿವಾಲ್, ಕುಮಾರ್ ವಿಶ್ವಾಸ್, ಅಶುತೋಷ್, ಸಂಜಯ್ ಸಿಂಗ್, ರಾಘವ್ ಚಡ್ಡಾ ಮತ್ತು ದೀಪಕ್ ಬಾಜಪೇಯಿ ವಿರುದ್ಧ ಮಾನಹಾನಿ ಪ್ರಕರಣವನ್ನು ಕೇಂದ್ರ ಸಚಿವರು ದಾಖಲಿಸಿದ್ದರು.