ನಾವು ಮನುಷ್ಯರು, ನೆಲದ ಮೇಲೆ ಕುಳಿತುಕೊಳ್ಳುತ್ತೇವೆ: ವಿಶೇಷ ಸಿದ್ದತೆ ಮಾಡದಂತೆ ಅಧಿಕಾರಿಗಳಿಗೆ ಯೋಗಿ ಸೂಚನೆ

ನಾವು ಮನುಷ್ಯರು, ನಾವು ನೆಲದ ಮೇಲೆ ಕೂರುತ್ತೇವೆ, ನಾನು ಭೇಟಿ ನೀಡುವ ಸ್ಥಳಗಳಲ್ಲಿ ಯಾವುದೇ ವಿಶೇಷ ಸಿದ್ಧತೆ ಮಾಡುವುದು ಬೇಡ ಎಂದು ಉತ್ತರ ಪ್ರದೇಶ ..
ಯೋಗಿ ಆದಿತ್ಯನಾಥ್
ಯೋಗಿ ಆದಿತ್ಯನಾಥ್
ಲಕ್ನೋ: ನಾವು ಮನುಷ್ಯರು, ನಾವು ನೆಲದ ಮೇಲೆ ಕೂರುತ್ತೇವೆ, ನಾನು ಭೇಟಿ ನೀಡುವ ಸ್ಥಳಗಳಲ್ಲಿ ಯಾವುದೇ ವಿಶೇಷ ಸಿದ್ಧತೆ ಮಾಡುವುದು ಬೇಡ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ರಾಜ್ಯದ ಜನತೆಯನ್ನು ಗೌರವಿಸಿದರೇ ಮುಖ್ಯಮಂತ್ರಿಗೆ ಗೌರವ ಸೂಚಿಸಿದಂತಾಗುತ್ತದೆ, ಹೀಗಾಗಿ ಪರಿಶೀಲನೆ ಪ್ರವಾಸಕ್ಕೆ ತೆರಳುವ ವೇಳೆ ಯಾವುದೇ ವಿಶೇಷ ಆಯೋಜನೆಗಳನ್ನು ಮಾಡಬೇಡಿ ಎಂದು ನಿನ್ನೆ ಯೋಗಿ ಆದಿತ್ಯನಾಥ್ ಅಧಿಕಾರಿಗಳಿಗೆ  ತಿಳಿಸಿದ್ದಾರೆ.
ಇತ್ತೀಚೆಗೆ ಮೃತಪಟ್ಟ ಬಿಎಸ್ ಎಫ್ ಯೋಧನ ಮನೆಗೆ ಯೋಗಿ ಆದಿತ್ಯನಾಥ್ ಭೇಟಿ ನೀಡಿದ್ದರು. ಈ ವೇಳೆ ಯೋಧನ ಮನೆಯಲ್ಲಿ ಸೋಫಾ, ಎ.ಸಿ ಕಾರ್ಪೆಟ್ ಗಳನ್ನು ತಂದು ಅಧಿಕಾರಿಗಳು ಹಾಕಿದ್ದರು, ನಂತರ ಸಿಎಂ ಹೊರಟ ತಕ್ಷಣೆ ಅವೆಲ್ಲವನ್ನು ಅಲ್ಲಿಂದ ತೆರವುಗೊಳಿಸಿದ್ದರು. ಮಾಧ್ಯಮಗಳಲ್ಲಿ ಈ ಸಂಬಂಧ ವರದಿಯಾಗಿತ್ತು. ಈ ಹಿನ್ನಲೆಯಲ್ಲಿ ಯೋಗಿ ಆದಿತ್ಯನಾಥ್ ಅಧಿಕಾರಿಗಳಿಗೆ ಈ ಸೂಚನೆ ನೀಡಿದ್ದಾರೆ.
ಇನ್ನೂ ಸಿಎಂ ಭೇಟಿ ನೀಡು ಹಿನ್ನೆಲೆಯಲ್ಲಿ ಕುಶಿನಗರ ಜಿಲ್ಲಾಡಳಿತ ಅಲ್ಲಿನ ಬುಡಕಟ್ಟು ಜನಾಂದ ಮಂದಿಗೆ ಸೋಪು ಶಾಂಪು ನೀಡಿ ಸ್ನಾನ ಮಾಡಿಕೊಂಡು ಶುಚಿಯಾಗಿ ಬರುವಂತೆ ಸೂಚಿಸಲಾಗಿತ್ತು. ಈ ಎಲ್ಲಾ ವರದಿಗಳನ್ನು ನೋಡಿದ ಯೋಗಿ ಆದಿತ್ಯನಾಥ್ ವಿಶೇಷ ಸಿದ್ಧತೆಗಳನ್ನು ಮಾಡದಂತೆ ಆದೇಶಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com