'ನನಗೆ ಕೇರಳದಿಂದ ಕೊಲೆ ಬೆದರಿಕೆ ಕರೆಗಳು ಬಂದಿದ್ದವು ಮತ್ತು ಸ್ವಯಂ ಸೇವಕರ ಹತ್ಯೆ ಪ್ರಕರಣದ ನೋವಿನಿಂದ ನಾನು ಉಜ್ಜೈನಿಯ ಸಭೆಯಲ್ಲಿ ಮಾತನಾಡುವಾಗ ಭಾವೋದ್ವೇಗಕ್ಕೆ ಒಳಗಾಗಿ ಕೇರಳ ಸಿಎಂ ತಲೆ ತೆಗೆದರೆ ಒಂದು ಕೋಟಿ ನೀಡುವುದಾಗಿ ಹೇಳಿಕೆ ನೀಡಿದ್ದೆ. ಆದರೆ ಈಗ ಆ ಹೇಳೆಕೆಯನ್ನು ವಾಪಸ್ ಪಡೆಯುತ್ತಿದ್ದೇನೆ ಮತ್ತು ಹೇಳಿಕೆಗೆ ವಿಷಾದ ವ್ಯಕ್ತಪಡಿಸುವುದಾಗಿ' ಆರ್ ಎಸ್ಎಸ್ ಸಹ ಪ್ರಚಾರ ಪ್ರಮುಖ್ ಕುಂದನ್ ಚಂದ್ರಾವತ್ ಅವರು ತಿಳಿಸಿದ್ದಾರೆ.