ಜಯಲಲಿತಾ ಸಾವಿನ ತನಿಖೆಗೆ ಆಗ್ರಹಿಸಿ ಪನ್ನೀರ್ಸೆಲ್ವಂ ಉಪವಾಸ ಧರಣಿ

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ ಜಯಲಲಿತಾ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆಗ್ರಹಿಸಿ ಮಾಜಿ ಮುಖ್ಯಮಂತ್ರಿ ಒ ಪನ್ನೀರ್ಸೆಲ್ವಂ ಮತ್ತು ಬೆಂಬಲಿಗರು ಬುಧವಾರ
ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಒ ಪನ್ನೀರ್ಸೆಲ್ವಂ
ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಒ ಪನ್ನೀರ್ಸೆಲ್ವಂ
Updated on
ಚೆನ್ನೈ: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ ಜಯಲಲಿತಾ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆಗ್ರಹಿಸಿ ಮಾಜಿ ಮುಖ್ಯಮಂತ್ರಿ ಒ ಪನ್ನೀರ್ಸೆಲ್ವಂ ಮತ್ತು ಬೆಂಬಲಿಗರು ಬುಧವಾರ ಒಂದು ದಿನದ ಉಪವಾಸ ಧರಣಿಗೆ ಮುಂದಾಗಿದ್ದಾರೆ. 
ತಮಿಳುನಾಡು, ಪುದುಚೆರಿ ಮತ್ತು ಕರೈಕಲ್ ನ ಎಲ್ಲ ಜಿಲ್ಲಾ ಮುಖ್ಯ ಘಟಕಗಳಲ್ಲಿ ಉಪವಾಸ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ. 
ಬೆಳಗ್ಗೆ ೯ ಘಂಟೆಯಿಂದ ಸಂಜೆ ೫ ಘಂಟೆಯವರೆಗೆ ಈ ಉಪವಾಸ ಧರಣಿ ಜಾರಿಯಲ್ಲಿರಲಿದೆ. 
ಪನ್ನೀರ್ಸೆಲ್ವಂ ಬಣಕ್ಕೆ ಸೇರಿದ ಎಐಡಿಎಂಕೆ ಸಂಸದರು ಮತ್ತು ಶಾಸಕರು ಕೂಡ ಈ ಪ್ರತಿಭನೆಯಲ್ಲಿ ಭಾಗಿಯಾಗಲಿದ್ದಾರೆ. 
ಚೆನೈನ ಅಪೋಲೋ ಆಸ್ಪತ್ರೆಯಲ್ಲಿ ೭೫ ದಿನಗಳ ಕಾಲ ದಾಖಲಾಗಿದ್ದ ಜಯಲಲಿತಾ ಕಳೆದ ವರ್ಷ ಡಿಸೆಂಬರ್ ನಲ್ಲಿ ಕೊನೆಯುಸಿರೆಳೆದಿದ್ದರು. ಜಯಲಲಿತಾ ಸಾವಿನ ಸುತ್ತ ನಿಗೂಢಗಳಿವೆ ಎಂದು ಪನ್ನೀರ್ಸೆಲ್ವಂ ಬಣದ ಸದಸ್ಯರು ಸಂದೇಹ ವ್ಯಕ್ತಪಡಿಸಿದ್ದಾರೆ. 
ಮಾರ್ಚ್ ೬ ರಂದು ಜಯಲಲಿತಾ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಿದ ದಾಖಲೆಗಳನ್ನು ಸಾರ್ವಜನಿಕಗೊಳಿಸಿರುವ ತಮಿಳುನಾಡು ಸರ್ಕಾರ, ಅಮ್ಮ ಅವರಿಗೆ ಅಗತ್ಯವಿದ್ದ ಅತ್ಯುತ್ತಮ ಚಿಕಿತ್ಸೆ ದೊರಕಿದೆ ಎಂದು ತಿಳಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com