ಇತ್ತೀಚಿಗಷ್ಟೇ ಪಂಜಾಬ್ ನಲ್ಲಿ ಆಮ್ ಆದ್ಮಿ ಪಕ್ಷದ ಸೋಲಿಗೆ ಇವಿಎಂ ಗಳೇ ಕಾರಣ, ಎಎಪಿ ಮತಗಳನ್ನು ಎಸ್ಎಡಿ-ಬಿಜೆಪಿ ಮೈತ್ರಿಕೂಟಕ್ಕೆ ವರ್ಗಾಯಿಸಲಾಗಿದೆ ಎಂದು ಕೇಜ್ರಿವಾಲ್ ಆರೋಪಿಸಿದ್ದರು. ಅಲ್ಲದೆ ಮುಂದಿನ ಮಹಾನಗರ ಪಾಲಿಕೆಗಳ ಚುನಾವಣೆಯಲ್ಲಿ ಇವಿಎಂಗಳ ಬದಲಾಗಿ ಮತಪತ್ರ ಬಳಸುವಂತೆ ಒತ್ತಾಯಿಸಿ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದರು.