ವಿಶ್ವಾಸಮತಕ್ಕೆ ಗೈರು, ಪಕ್ಷ ತೊರೆದ ಗೋವಾ ಕಾಂಗ್ರೆಸ್ ಶಾಸಕ

ಗೋವಾ ವಿಧಾನಸಭೆಯಲ್ಲಿ ಗುರುವಾರ ನಡೆದ ಮಹತ್ವದ ವಿಶ್ವಾಸಮತದ ವೇಳೆ ಗೈರು ಆಗಿದ್ದ ಕಾಂಗ್ರೆಸ್ ಶಾಸಕ ಹಾಗೂ ಹಿರಿಯ....
ವಿಶ್ವಜೀತ್ ರಾಣೆ
ವಿಶ್ವಜೀತ್ ರಾಣೆ
Updated on
ಪಣಜಿ: ಗೋವಾ ವಿಧಾನಸಭೆಯಲ್ಲಿ ಗುರುವಾರ ನಡೆದ ಮಹತ್ವದ ವಿಶ್ವಾಸಮತದ ವೇಳೆ ಗೈರು ಆಗಿದ್ದ ಕಾಂಗ್ರೆಸ್ ಶಾಸಕ ಹಾಗೂ ಹಿರಿಯ ಕಾಂಗ್ರೆಸ್ ನಾಯಕರೊಬ್ಬರ ಪುತ್ರ ವಿಶ್ವಜೀತ್ ರಾಣೆ ಅವರು ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಕಾಂಗ್ರೆಸ್ ಕೇಂದ್ರ ನಾಯಕರ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿರುವ ರಾಣೆ, ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ರಾಜಿನಾಮೆ ನೀಡಿದ್ದಾರೆ.
ಪಕ್ಷದ ಕೆಟ್ಟ ನಿರ್ವಹಣೆ ವಿರುದ್ಧ ನಾನು ತೆಗೆದುಕೊಂಡ ಮೊದಲ ಕ್ರಮ ಇದು. ಕಾಂಗ್ರೆಸ್ ನೊಂದಿಗೆ ಮುಂದುವರೆಯುವ ಯಾವುದೇ ಉದ್ದೇಶ ನನಗೆ ಇಲ್ಲ. ಕಾಂಗ್ರೆಸ್ ನಾಯಕರ ಬಗ್ಗೆ ನಾನು ಭ್ರಮನಿರಸನಗೊಂಡಿದ್ದು, ಹೊಸದಾಗಿ ಚುನಾವಣೆ ಎದುರಿಸುತ್ತೇನೆ ಎಂದು ರಾಣೆ ತಿಳಿಸಿದ್ದಾರೆ.
ಎರಡು ದಿನಗಳ ಹಿಂದಷ್ಟೇ ಈ ಬಗ್ಗೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಗೆ ಪತ್ರ ಬರೆದಿದ್ದ ರಾಣೆ, ಪಕ್ಷದ ಕಾರ್ಯನಿರ್ವಹಣೆಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಅಲ್ಲದೆ ಈ ಬಗ್ಗೆ ಕ್ರಮ ತೆಗೆದುಕೊಳ್ಳದಿದ್ದರೆ ರಾಜಿನಾಮೆ ನೀಡುವುದಾಗಿ ಬೆದರಿಕೆ ಹಾಕಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com