ಕಲಾಪ ಆರಂಭವಾಗುತ್ತಿದ್ದಂತೆಯೇ, ನಿಯಮ 69ರ ಅಡಿ ಡೈರಿ ವಿಚಾರದ ಬಗ್ಗೆ ಚರ್ಚೆ ನಡೆಸಲು ಅವಕಾಶ ನೀಡಬೇಕೆಂದು ಬಿಜೆಪಿ ಸದಸ್ಯರು ಆಗ್ರಹಿಸಿದರು. ಆದರೆ ನಿಲುವಳಿ ಸೂಚನೆ ಅಡಿಯಲ್ಲಿ ಡೈರಿ ವಿಚಾರ ಚರ್ಚೆಗೆ ಅವಕಾಶ ಇಲ್ಲ ಎಂದು ಕಾನೂನು ಸಚಿವ ಟಿಬಿ ಜಯಚಂದ್ರ ಉತ್ತರ ನೀಡಿದಾಗ, ಬಿಜೆಪಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು.