ನವದೆಹಲಿ: ಇತ್ತೀಚಿಗೆ ಮುಕ್ತಾಯಗೊಂಡ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗಿಂತ ಹೆಚ್ಚು ಸ್ಥಾನ ಪಡೆದರೂ ಸರ್ಕಾರ ರಚಿಸುವಲ್ಲಿ ವಿಫಲವಾಗಿರುವ ಗೋವಾ ಕಾಂಗ್ರೆಸ್ ನಲ್ಲಿ ಈಗ ಭಿನ್ನಾಭಿಪ್ರಾಯ ಸ್ಫೋಟಗೊಂಡಿದ್ದು, ವಿಶ್ವಜೀತ್ ರಾಣೆ ಅವರು ಪಕ್ಷ ಹಾಗೂ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ ಬೆನ್ನಲ್ಲೇ ಶುಕ್ರವಾರ ಮತ್ತೊಬ್ಬ ನಾಯಕ ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ್ದಾರೆ.