ನವದೆಹಲಿ: ಭಾರತೀಯರಿಗೆ ಆಧಾರ್ ಗುರುತಿನ ಚೀಟಿಗಳನ್ನು ತೆಗೆದುಕೊಳ್ಳಲು ಕೇಂದ್ರ ಸರ್ಕಾರ ಒತ್ತಡ ಹೇರುತ್ತಿದೆ ಎಂದು ದೂರಿರುವ ವಿಪಕ್ಷಗಳು, ಹಣಕಾಸು ಮಸೂದೆಯ ಅಂಗೀಕಾರಕ್ಕೆ ಮುಂಚಿತವಾಗಿಯೇ ಲೋಕಸಭೆಯಿಂದ ಹೊರನಡೆದಿವೆ. ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್ ಮತ್ತು ಬಿಜು ಜನತಾದಳ ಸದಸ್ಯರು ಇದನ್ನು ತೀವ್ರವಾಗಿ ವಿರೋಧಿಸಿದ್ದಾರೆ.