ನಿಗದಿಯಂತೆ ಏ.9ಕ್ಕೆ ರಜನಿಕಾಂತ್ ಶ್ರೀಲಂಕಾದ ಜಾಫ್ನಾಕ್ಕೆ ತೆರಳಿ, ನಿರಾಶ್ರಿತ ತಮಿಳಿರಿಗಾಗಿ 22 ಕೋಟಿ ರುಪಾಯಿ ವೆಚ್ಚದಲ್ಲಿ ನಿರ್ಮಿಸಿರುವ 150 ಮನೆಗಳ ಹಸ್ತಾಂತರ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಿತ್ತು. ಆದರೆ ತಮಿಳು ರಾಜಕೀಯ ಪಕ್ಷಗಳು ಮತ್ತು ವಿವಿಧ ಸಂಘಟನೆಗಳು, ತಮಿಳರನ್ನು ಕಡೆಗಣಿಸುವ ಶ್ರೀಲಂಕಾಕ್ಕೆ ಭೇಟಿ ನೀಡಬಾರದು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದವು.