ಬೆಂಗಳೂರು: ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರ ಆಡಳಿತಾವಧಿ ಮುಂದಿನ ಜುಲೈ ತಿಂಗಳಲ್ಲಿ ಅಂತ್ಯಗೊಳ್ಳಲಿದ್ದು, ಮುಂದಿನ ರಾಷ್ಟ್ರಪತಿ ಯಾರಾಗಲಿದ್ದಾರೆ ಎಂಬುದರ ಬಗ್ಗೆ ತೀವ್ರ ಚರ್ಚೆ ಆರಂಭವಾಗಿದೆ. ಇತ್ತೀಚಿಗಷ್ಟೆ ಬಿಜೆಪಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್ಎಸ್ಎಸ್)ದ ಮುಖ್ಯಸ್ಥ ಮೋಹನ್ ಭಾಗವತ್ ಅವರು ಹೆಸರು ಕೇಳಿ ಬಂದಿತ್ತು. ಈಗ ಅವರನ್ನು ಬೆಂಬಲಿಸಿ ರಾಜ್ಯದ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ರೈಲ್ವೆ ಸಚಿವ ಜಾಫರ್ ಷರೀಪ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.