ನವದೆಹಲಿ: ವಿವಿಧ ರಾಷ್ಟ್ರೀಯ ಬ್ಯಾಂಕ್ ಗಳಿಂದ ಸಾವಿರಾರು ಕೋಟಿ ರುಪಾಯಿ ಸಾಲ ಪಡೆದು ವಿದೇಶಕ್ಕೆ ಪರಾರಿಯಾಗಿರುವ ಮದ್ಯದ ದೊರೆ ವಿಜಯ್ ಮಲ್ಯ ಅವರಿಗೆ ಈಗ ಮತ್ತಷ್ಟು ಸಂಕಷ್ಟ ಎದುರಾಗಿದ್ದು, ಸಾಲದ ದೊರೆಯ ಗಡಿಪಾರಿನ ಬಗ್ಗೆ ಚರ್ಚಿಸಲು ಮತ್ತು ಕಾನೂನು ಪ್ರಕ್ರಿಯೆ ತ್ವರಿತಗೊಳಿಸಲು ಸಿಬಿಐ ಹಾಗೂ ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಗಳ ಜಂಟಿ ತಂಡ ಮಂಗಳವಾರ ಲಂಡನ್ ತಲುಪಿದೆ.