ಜಮ್ಮು ಮತ್ತು ಕಾಶ್ಮೀರದ ಪೂಂಚ್ ನ ಕೃಷ್ಣ ಘಾಟಿ ಸೆಕ್ಟರ್ ನಲ್ಲಿ ನಡೆದ ಯೋಧರ ಶಿರಚ್ಛೇದದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದ ಭಾರತೀಯ ಸೇನೆ, ಪಾಕಿಸ್ತಾನ ಕೃತ್ಯವನ್ನು ಕಟುವಾಗಿ ಖಂಡಿಸಿತ್ತು. ಇದೊಂದು ಪಾಶವೀ ಕೃತ್ಯ ಮತ್ತು ಅಮಾನವೀಯ ನಡುವಳಿಕೆ ಎಂದು ಪ್ರತಿಭಟನೆ ಸಲ್ಲಿಸಿರುವುದಾಗಿ ಭಾರತೀಯ ಸೇನೆ ಇಂದು ಪ್ರಕಟಣೆಯಲ್ಲಿ ತಿಳಿಸಿದೆ.