ಕಳೆದ ಸೋಮವಾರ ಜಮ್ಮು ಮತ್ತು ಕಾಶ್ಮೀರದ ಪೂಂಚ್ ನ ಕೃಷ್ಣ ಘಾಟಿ ಸೆಕ್ಟರ್ ನಲ್ಲಿ ಭಾರತದ ಭೂಪ್ರದೇಶಕ್ಕೆ ನುಗ್ಗಿ ಅಪ್ರಚೋದಿತ ದಾಳಿ ನಡೆಸಿದ್ದ ಪಾಕಿಸ್ತಾನ ಸೇನೆ, ಇಬ್ಬರು ಯೋಧರ ಅಂಗಾಂಗಗಳನ್ನು ಕತ್ತರಿಸಿತ್ತು. ಪಾಕಿಸ್ತಾನ ಸೇನೆಯ ಈ ಕೃತ್ಯವನ್ನು ಭಾರತ ತೀವ್ರವಾಗಿ ಖಂಡಿಸಿದ್ದು, ಇದೊಂದು ಪಾಶವೀ ಕೃತ್ಯ ಮತ್ತು ಅಮಾನವೀಯ ನಡುವಳಿಕೆ ಎಂದು ಹೇಳಿದೆ.