ಕೂಂಬಿಂಗ್ ಕಾರ್ಯಾಚರಣೆ ನಿಯಮಿತ ಕಾರ್ಯಾಚರಣೆಯಾಗಿದ್ದು, ಹೊಸದಾಗಿ ಏನೂ ಮಾಡುತ್ತಿಲ್ಲ. ಕೆಲವು ದಿನಗಳ ಹಿಂದೆ ಬ್ಯಾಂಕ್ ನ್ನು ದರೋಡೆ ಮಾಡಲಾಗಿತ್ತು. ಪೊಲೀಸರನ್ನು ಹತ್ಯೆ ಮಾಡಲಾಗಿತ್ತು. ಆದ್ದರಿಂದ ಪರಿಸ್ಥಿತಿಯನ್ನು ಹತೋಟಿಗೆ ತರಲು ಕೂಂಬಿಂಗ್ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಸೇನಾ ಮುಖ್ಯಸ್ಥ ಬಿಪಿನ್ ರಾವತ್ ವರದಿಗಾರರಿಗೆ ಸ್ಪಷ್ಟನೆ ನೀಡಿದ್ದಾರೆ.