ಬಹು ಕೋಟಿ ಮೊತ್ತದ ಮೇವು ಹಗರಣ ಪ್ರಕರಣದಿಂದ ಲಾಲೂ ಪ್ರಸಾದ್ ಯಾದವ್ ಅವರನ್ನು ಮುಕ್ತಗೊಳಿಸಿ ಜಾರ್ಖಂಡ್ ಹೈಕೋರ್ಟ್ ನ 2014ರ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಸಿಬಿಐ ಮನವಿ ಸಲ್ಲಿಸಿತ್ತು.
ಸಿಬಿಐ ಮನವಿ ಪರಿಗಣಿಸಿರುವ ಸುಪ್ರೀಂ ಕೋರ್ಟ್ ಕ್ರಿಮಿನಲ್ ಸಂಚು ಆರೋಪದಿಂದ ಮುಕ್ತಗೊಳಿಸಲು ಸಾಧ್ಯವಿಲ್ಲ ಎಂದಿದ್ದು, ಸಿಬಿಐ ವಿಚಾರಣೆ ಮುಂದುವರಿಸಲು ಸೂಚಿಸಿದೆ. ಜೊತೆಗೆ ಲಾಲೂ ವಿರುದ್ಧದ ಕ್ರಿಮಿನಲ್ ಸಂಚು ಆರೋಪ ಕೈ ಬಿಡಲು ಸಾಧ್ಯವಿಲ್ಲ. ಎಲ್ಲಾ ಆರೋಪಗಳ ತನಿಖೆಯನ್ನು ಪ್ರತ್ಯೇಕವಾಗಿ ಕೈಗೆತ್ತಿಕೊಳ್ಳುವಂತೆ ಸುಪ್ರೀಂಕೋರ್ಟ್ ಸೂಚಿಸಿದೆ.