ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ಮೂಲಕ ಕಳೆದ ನಾಲ್ಕು ವರ್ಷಗಳಲ್ಲಿ ರಾಜ್ಯ ಸರ್ಕಾರ ಗಣನೀಯ ಸಾಧನೆ ಮಾಡಿದೆ. ಎಲ್ಲರಿಗೂ ಕುಡಿಯುವ ನೀರು ಒದಗಿಸುವ ಕಾರ್ಯವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದ್ದೇವೆ ಎಂದರು. ಅಲ್ಲದೆ ಗ್ರಾಮೀಣ ಜನರಿಗೆ ಅವಶ್ಯವಾದ ಭೂ ದಾಖಲೆ, ಪತ್ರಗಳು ಮತ್ತಿತರ ಸೇವೆಗಳಿಗೆ ಏಕಗವಾಕ್ಷಿ ಸೇವಾ ಕೇಂದ್ರಗಳನ್ನು ಆರಂಭಿಸಲಾಗಿದೆ ಎಂದು ಸಚಿವರು ತಿಳಿಸಿದರು.