ಬರದಿಂದ ಕಂಗೆಟ್ಟಿದ್ದ ವಿಜಯಪುರ ಜಿಲ್ಲೆ ವರುಣನ ಆರ್ಭಟಕ್ಕೆ ತತ್ತರಿಸಿ ಹೋಗಿದ್ದು ಜಿಲ್ಲೆಯ ಮುದ್ದೆಬಿಹಾಳ ತಾಲೂಕಿನ ಬನವಾಸಿ, ಗೋನಾಳ, ಸರೂರು, ತಂಗಡಗಿ, ಬಿಸಲಕೋಡ, ಗದ್ದಲಮರಿ ವ್ಯಾಪ್ತಿಯಲ್ಲಿ ಭಾರಿ ಮಳೆಯಾಗಿದೆ. ಗದಗದಲ್ಲಿ ನೀರಿನ ರಭಸಕ್ಕೆ ಕೆಎಸ್ ಆರ್ ಟಿಸಿ ಬಸ್ ಕೊಚ್ಚಿ ಹೋದ ಘಟನೆ ಸಂಭವಿಸಿದೆ. ತಾಳಿಕೋಟೆ ಪಟ್ಟಣ ಹಾಗೂ ಸುತ್ತಮುತ್ತಲ ಪ್ರದೇಶ ಸಂಪೂರ್ಣ ಜಲಾವೃತಗೊಂಡಿದೆ. ಮೈಲೇಶ್ವರದಲ್ಲಿ ಭಾರೀ ಮಳೆಗೆ ನಿರ್ಮಾಣ ಹಂತದಲ್ಲಿದ್ದ ರಸ್ತೆ ಕೊಚ್ಚಿ ಹೋಗಿ, ಗ್ರಾಮದೊಳಕ್ಕೆ ನೀರು ನುಗ್ಗಿದೆ. ಇದರಿಂದಾಗಿ ಗ್ರಾಮದ ಜನರು ರಾತ್ರಿಯಿಡೀ ಜಾಗರಣೆ ಮಾಡುವಂತಾಗಿದೆ ಎಂದು ಖಾಸಗಿ ವಾಹಿನಿಗಳು ವರದಿ ಮಾಡಿವೆ.