ಆಮ್ ಆದ್ಮಿ ಪಕ್ಷದ ಪಂಜಾಬ್ ಘಟಕ ವಿಸರ್ಜನೆ: ನಾಯಕರಿಂದ ಒಗ್ಗಟ್ಟು ಪ್ರದರ್ಶನ

ಆಮ್ ಆದ್ಮಿ ಪಕ್ಷ ತನ್ನ ಪಂಜಾಬ್ ನ ಘಟಕವನ್ನು ವಿಸರ್ಜನೆ ಮಾಡಿದ್ದು, ಪಂಜಾಬ್ ನ ಆಪ್ ನಾಯಕರು ಒಗ್ಗಟ್ಟು ಪ್ರದರ್ಶಿಸಿದ್ದಾರೆ.
ಆಮ್ ಆದ್ಮಿ ಪಕ್ಷ
ಆಮ್ ಆದ್ಮಿ ಪಕ್ಷ
Updated on
ಚಂಡೀಗಢ: ಆಮ್ ಆದ್ಮಿ ಪಕ್ಷ ತನ್ನ ಪಂಜಾಬ್ ನ ಘಟಕವನ್ನು ವಿಸರ್ಜನೆ ಮಾಡಿದ್ದು, ಪಂಜಾಬ್ ನ ಆಪ್ ನಾಯಕರು ಒಗ್ಗಟ್ಟು ಪ್ರದರ್ಶಿಸಿದ್ದಾರೆ. 
ಪಂಜಾಬ್ ಗೆ ಹೊಸದಾಗಿ ನೇಮಕಗೊಂಡಿರುವ ರಾಜ್ಯಾಧ್ಯಕ್ಷ ಭಗವಂತ್ ಮಾನ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪಂಜಾಬ್ ಘಟಕವನ್ನು ವಿಸರ್ಜಿಸಲು ನಿರ್ಧರಿಸಲಾಗಿದೆ. ಸಭೆಯಲ್ಲಿ ಪಂಜಾಬ್ ನ 20 ಶಾಸಕರು ವಿಭಾಗೀಯ ಸಹ-ಸಂಯೋಜಕರು ಭಾಗಿಯಾಗಿದ್ದರು. 
ಸಭೆಯ ಬಗ್ಗೆ ಮಾಹಿತಿ ನೀಡಿರುವ ಪಕ್ಷದ ವಕ್ತಾರ " ಪಂಜಾಬ್ ವಿಧಾನಸಭಾ ಚುನಾವಣೆಯ ಬಗ್ಗೆ ಸಕಾರಾತ್ಮಕ ಹಾಗೂ ಋಣಾತ್ಮಕ ಪ್ರತಿಕ್ರಿಯೆ ಪಡೆದು ಚರ್ಚೆ ನಡೆಸಲಾಯಿತು. ಪಕ್ಷದ ಸಹ ಅಧ್ಯಕ್ಷರಾದ ಅಮಾನ್ ಅರೋರಾ ಅವರು ಮೇ.18 ರಿಂದ ಪ್ರವಾಸ ಕೈಗೊಳ್ಳಲಿದ್ದು ಪದಾಧಿಕಾರಿಗಳನ್ನು ಭೇಟಿ ಮಾಡಿ ಹೊಸ ಪದಾಧಿಕಾರಿಗಳ ನೇಮಕದ ಬಗ್ಗೆ ಸಲಹೆ ಕೇಳಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. 
ಪಕ್ಷ ವಿರೋಧಿ ಚಟುವಟಿಕೆಗಳನ್ನು ಗಮನಿಸಲು ಪಕ್ಷ ಶಿಸ್ತು ಸಮಿತಿಯನ್ನು ರಚಿಸಲು ನಿರ್ಧರಿಸಿದೆ. ಮಾಧ್ಯಮ, ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಇನ್ನಿತರ ವೇದಿಕೆಗಳಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸುವವರ ಬಗ್ಗೆ ಈ ಸಮಿತಿ ನಿಗಾ ವಹಿಸಲಿದೆ ಎಂದು ಪಕ್ಷದ ವಕ್ತಾರರು ತಿಳಿಸಿದ್ದಾರೆ. 
ಇದೇ ವೇಳೆ ಆಮ್ ಆದ್ಮಿ ಪಕ್ಷವನ್ನು ಕುಗ್ಗಿಸಲು ಕಾಂಗ್ರೆಸ್, ಶಿರೋಮಣಿ ಅಕಾಲಿ ದಳ ಹಾಗೂ ಬಿಜೆಪಿ ರೂಪಿಸಿರುವ ಷಡ್ಯಂತ್ರಗಳು ಪಕ್ಷದ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಆಪ್ ನ ಸಂಸದ, ಪಂಜಾಬ್ ರಾಜ್ಯಾಧ್ಯಕ್ಷ ಭಗವಂತ್ ಮಾನ್ ಮಾಧ್ಯಮಗಳಿಗೆ ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com