ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಮುಖಂಡರಾದ ಮೋಹನ್ ಕೊಂಡಜ್ಜಿ, ಸಿಎಂ ಲಿಂಗಪ್ಪ ಹಾಗೂ ಮಾಜಿ ಮೇಯರ್ ಪಿಆರ್ ರಮೇಶ್ ಅವರನ್ನು ವಿಧಾನ ಪರಿಷತ್ ಗೆ ನಾಮ ನಿರ್ದೇಶನ ಮಾಡಿ ರಾಜ್ಯಪಾಲ ವಜುಭಾಯಿ ವಾಲಾ ಅವರಿಗೆ ಶಿಫಾರಸು ಮಾಡಿದ್ದರು. ಈ ಪೈಕಿ ಮೋಹನ್ ಕೊಂಡಜ್ಜಿ ಹಾಗೂ ಪಿಆರ್ ರಮೇಶ್ ಹೆಸರಿಗೆ ರಾಜ್ಯಪಾಲರು ಒಪ್ಪಿಗೆ ಸೂಚಿಸಿದ್ದಾರೆ. ಆದರೆ ಶಿಕ್ಷಣ, ಸಮಾಜ ಸೇವೆ ಕೋಟಾದಲ್ಲಿ ಸಿಎಂ ಲಿಂಗಪ್ಪ ಅವರನ್ನು ವಿಧಾನ ಪರಿಷತ್ ಗೆ ನಾಮ ನಿರ್ದೇಶನ ಮಾಡಲು ನಿರಾಕರಿಸಿದ್ದಾರೆ.