ಭಾರತದ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಹರೀಶ್ ಸಾಳ್ವೆ ಅವರು, ವಿಚಾರಣೆ ಮುಗಿಯುವ ಮೊದಲೇ ಪಾಕಿಸ್ತಾನ ಕುಲಭೂಷಣ್ ಯಾದವ್ ರನ್ನು ಗಲ್ಲಿಗೇರಿಸುವ ಸಾಧ್ಯತೆಯೂ ಇದೆ ಎಂದು ಆತಂಕ ವ್ಯಕ್ತಪಡಿಸಿದರು. ಮಾತ್ರವಲ್ಲ ಪಾಕಿಸ್ತಾನ ವಿಯೆನ್ನಾ ಘೋಷಣೆಯನ್ನು ಉಲ್ಲಂಘಿಸಿದೆ. ಜಾಧವ್ ಸಂಪರ್ಕಿಸಲು ಭಾರತ 16 ಬಾರಿ ಪ್ರಯತ್ನಪಟ್ಟರೂ ಅವಕಾಶ ನೀಡಿಲ್ಲ. ಜತೆಗೆ ಅವರ ತಾಯಿ ಕೇಳಿದಾಗಲೂ ಭೇಟಿ ನಿರಾಕರಿಸಲಾಗಿದೆ. ಪರಿಸ್ಥಿತಿ ತೀರಾ ಕಳವಳಕಾರಿಯಾಗಿದೆ ಮತ್ತು ತುಂಬಾ ತುರ್ತಿನದಾಗಿದೆ ಎಂದು ಹೇಳಿದ್ದರು,