ಇತ್ತೀಚೆಗೆ ಮುಕ್ತಾಯಗೊಂಡಿದ್ದ ಪಂಚ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಜಯಗಳಿಸಿದ್ದ ಬೆನ್ನಲ್ಲೇ ಆಮ್ ಆದ್ಮಿ ಪಕ್ಷ ಮತಯಂತ್ರಗಳಲ್ಲಿ ವ್ಯಾಪಕ ಅಕ್ರಮ ನಡೆದಿದ್ದು. ದೋಷಪೂರಿತ ಮತಯಂತ್ರಗಳಿಂದ ಬಿಜೆಪಿಗೆ ಹೆಚ್ಚಿನ ಮತಗಳು ಲಭಿಸಿವೆ. ಮತಯಂತ್ರದ ಯಾವುದೇ ಬಟನ್ ಒತ್ತಿದರೂ ಬಿಜೆಪಿಗೆ ಮತ ಬೀಳುವಂತೆ ರಚಿಸಲಾಗಿದೆ ಎಂದು ಗಂಭೀರ ಆರೋಪ ಮಾಡಿತ್ತು. ಇದಕ್ಕೆ ಬಿಎಸ್ಪಿ, ತೃಣಮೂಲ ಕಾಂಗ್ರೆಸ್ ಸೇರಿದಂತೆ ವಿವಿಧ ಪ್ರತಿಪಕ್ಷಗಳು ಬೆಂಬಲ ನೀಡಿ ಮತ್ತೆ ಈ ಹಿಂದಿನ ಬ್ಯಾಲಟ್ ಪೇಪರ್ ವ್ಯವಸ್ಥೆಯನ್ನು ತರುವಂತೆ ಆಗ್ರಹಿಸಿದ್ದವು.