ತಿವಾರಿ ಸಾವಿನ ಕುರಿತು ಇಂಡಿಯನ್ ಎಕ್ಸ್ ಪ್ರೆಸ್ ನೊಂದಿಗೆ ಮಾತನಾಡಿದ ಮಾಯಾಂಕ್ ತಿವಾರಿ ಅವರು, ನನ್ನ ಸಹೋದರನಿಗೆ ಕರ್ನಾಟಕ ಸರ್ಕಾರ ಹಿರಿಯ ಅಧಿಕಾರಿಗಳು ಕಿರುಕುಳ ನೀಡಿದ್ದಾರೆ. ಅಲ್ಲದೆ ತಿವಾರಿಗೆ ಕೆಲವು ವ್ಯಕ್ತಿಗಳು ಜೀವ ಬೆದರಿಕೆ ಹಾಕಿದ್ದನ್ನು ಆತ ನಮ್ಮ ಬಳಿ ಹೇಳಿಕೊಂಡಿದ್ದ. ಅಲ್ಲದೆ ನಮ್ಮ ಕುಟುಂಬಕ್ಕೂ ಬೆದರಿಕೆ ಹಾಕಲಾಗಿತ್ತು. ಇದೇ ಕಾರಣಕ್ಕೆ ಕಳೆದ ಮಾರ್ಚ್ ನಲ್ಲಿ ನನ್ನ ಪೋಷಕರು ಬೆಂಗಳೂರಿಗೆ ಹೋಗಲು ಬಯಸಿದ್ದರು. ಆದರೆ ಅನುರಾಗ್ ತಿವಾರಿ ಬರಬೇಡಿ ಎಂದು ಪೋಷಕರನ್ನು ತಡೆದಿದ್ದರು. ಇದರಲ್ಲಿ ಕೆಲವು ಅಧಿಕಾರಿಗಳು ಹಾಗೂ ಸಚಿವರು ಸಹ ಭಾಗಿಯಾಗಿದ್ದಾರೆ ಎಂದು ಆರೋಪಿಸಿದ್ದಾರೆ.