ಆಂಧ್ರದಲ್ಲಿ ವೈಎಸ್ಆರ್ ಕಾಂಗ್ರೆಸ್ ನಾಯಕ ಹಾಗೂ ಬೆಂಬಲಿಗನ ಹತ್ಯೆ

ವೈಎಸ್ಆರ್ ಕಾಂಗ್ರೆಸ್ ನಾಯಕ ಹಾಗೂ ಅವರ ಬೆಂಬಲಿಗರೊಬ್ಬರನ್ನು ವಿರೋಧಿಗಳು ಭಾನುವಾರ ಬರ್ಬರವಾಗಿ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ಕರ್ನೂಲ್: ವೈಎಸ್ಆರ್ ಕಾಂಗ್ರೆಸ್ ನಾಯಕ ಹಾಗೂ ಅವರ ಬೆಂಬಲಿಗರೊಬ್ಬರನ್ನು ವಿರೋಧಿಗಳು ಭಾನುವಾರ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಆಂಧ್ರಪ್ರದೇಶದ ಕೃಷ್ಣಗಿರಿ ಸಮೀಪ ನಡೆದಿದೆ. ಅಲ್ಲದೆ ಅವರ ಕಾರಿನ ಮೇಲೆ ನಾಡ ಬಾಂಬ್ ಎಸೆಯಲಾಗಿದೆ.
ಇಂದು ಬೆಳಗ್ಗೆ 11.30ರ ಸುಮಾರಿಗೆ ಈ ಘಟನೆ ನಡೆದಿದ್ದು, ವೈಎಸ್ಆರ್ ಕಾಂಗ್ರೆಸ್ ನಾಯಕ ನಾರಾಯಣ್ ರೆಡ್ಡಿ ಅವರು ಕೃಷ್ಣಗಿರಿಯಲ್ಲಿ ಮದುವೆ ಮುಗಿಸಿಕೊಂಡು ವಾಪಸ್ ಮನೆಗೆ ಬರುತ್ತಿದ್ದ ವೇಳೆ ದುಷ್ಕರ್ಮಿಗಳು ಅವರ ಕಾರು ತಡೆದ ಹತ್ಯೆ ಮಾಡಿದ್ದಾರೆ.
ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. 
ನಾರಾಯಣ ರೆಡ್ಡಿ ಅವರು 2014ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಪಟ್ಟಿಕೊಡಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಕೆಇ ಕೃಷ್ಣಮೂರ್ತಿ ಅವರ ವಿರುದ್ಧ ಸೋಲು ಅನುಭವಿಸಿದ್ದರು. ಬಳಿಕ ವೈಎಸ್ ಆರ್ ಕಾಂಗ್ರೆಸ್ ಸೇರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com