ನವದೆಹಲಿ: ಅರವಿಂದ್ ಕೇಜ್ರಿವಾಲ್ ಅವರ ವಕೀಲ ರಾಮ್ ಜೇಟ್ಮಲಾನಿ ತಮ್ಮ ವಿರುದ್ಧ 'ಮೋಸಗಾರ' ಎಂಬ ಪದ ಬಳಸಿರುವುದಕ್ಕೆ, ದೆಹಲಿ ಮುಖ್ಯಮಂತ್ರಿ ವಿರುದ್ಧ ಮತ್ತೊಂದು ಮಾನಹಾನಿ ಪ್ರಕರಣ ದಾಖಲಿಸಿರುವ ಕೇಂದ್ರ ಸಚಿವ ಅರುಣ್ ಜೇಟ್ಲಿ ೧೦ ಕೋಟಿ ರೂ ಪರಿಹಾರ ಕೇಳಿದ್ದಾರೆ. ಈ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ಕೇಜ್ರಿವಾಲ್ ಅವರಿಗೆ ನೋಟಿಸ್ ನೀಡಿದೆ.