ದೂರು ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಥಾಯಿ, ನಾನು ಬಿಬಿಎಂಪಿಯಲ್ಲಿ ಕೆಲಸ ಮಾಡುತ್ತಿದ್ದಾಗ ೨ ಸಾವಿರ ಕೋಟಿ ರೂ. ಅಕ್ರಮ ಜಾಹೀರಾತು ದಂಧೆಯ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸಿದ್ದೆ. ಇದಾದ ಬಳಿಕ ತನಗೆ ಕಿರುಕುಳ ಆರಂಭವಾಯಿತು. ವರದಿಯನ್ನು ಸರ್ಕಾರವೇ ಅಂಗೀಕರಿಸಿ ಸಿಐಡಿಗೆ ಒಪ್ಪಿಸಿ ತಮಗೆ ಅಭಿನಂದನೆ ಸಲ್ಲಿಸಿತ್ತು. ಆದರೆ ಅಧಿಕಾರಿಗಳು ಮಾತ್ರ ತನ್ನ ಸೇವಾ ವರದಿಯಲ್ಲಿ ‘ನಿಮ್ಮ ಸೇವೆ ತೃಪ್ತಿ ತಂದಿಲ್ಲ’ ಎಂದು ಬರೆದು ತನ್ನ ಮುಂದಿನ ಸೇವೆಗೆ ಹಾಗೂ ಬಡ್ತಿಗೆ ತೊಂದರೆ ಮಾಡಿದ್ದಾರೆ. ಅಲ್ಲಿಂದ ಸಕಾಲ ಯೋಜನೆ ಆಡಳಿತಾಧಿಕಾರಿಯಾಗಿ ನೇಮಕಗೊಂಡ ಬಳಿಕವೂ ಕಿರುಕುಳ ಮುಂದುವರೆದಿದೆ. ಇಲ್ಲಿನ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ. ಕಲ್ಪನಾ ಅವರು, ದಿನನಿತ್ಯ ತಮಗೆ ಶೋಕಾಸ್ ನೋಟೀಸ್ ಜಾರಿ ಮಾಡಿ, ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.