ನವದೆಹಲಿ: ಬಾಬ್ರಿ ಮಸೀದಿ ಧ್ವಂಸ ಪ್ರಕರಣವನ್ನು ಆಲಿಸುತ್ತಿರುವ ಸಿಬಿಐ ವಿಶೇಷ ನ್ಯಾಯಾಲಯ, ಮೇ ೩೦ ರಂದು ತನ್ನೆದುರು ಹಾಜರಾಗುವಂತೆ ಆರೋಪ ಎದುರಿಸುತ್ತಿರುವ ಬಿಜೆಪಿ ಮುಖಂಡರಾದ ಎಲ್ ಕೆ ಅಡ್ವಾಣಿ, ಉಮಾ ಭಾರತಿ ಮತ್ತು ಮುರಳಿ ಮನೋಹರ್ ಜೋಶಿ ಅವರಿಗೆ ಸಮನ್ಸ್ ನೀಡಿದೆ. ಇದಕ್ಕೂ ಮುಂಚಿತವಾಗಿ ಸುಪ್ರೀಂ ಕೋರ್ಟ್ ಈ ಮುಖಂಡರ ವಿರುದ್ಧ ಕ್ರಿಮಿನಲ್ ಪಿತೂರಿಯ ಆರೋಪವನ್ನು ಹೊರಿಸಿತ್ತು. ಕೋರ್ಟ್ ಮುಂದೆ ಹಾಜರಾದ ನಂತರ ಈ ಮುಖಂಡರ ವಿರುದ್ಧ ಆರೋಪ ಪಟ್ಟಿ ಸಲ್ಲಿಸಲಾಗುವುದು ಎಂದು ಸಿಬಿಐ ವಕೀಲ ಲಲಿತ್ ಸಿಂಗ್ ಹೇಳಿದ್ದಾರೆ.