ಕೇಜ್ರಿವಾಲ್ ಸಂಬಂಧಿಕರ ವಿರುದ್ಧ ಆರೋಪ: ರಾಹುಲ್ ಶರ್ಮಾ ವಿರುದ್ಧ ಗುಂಡಿನ ದಾಳಿ

ಪಿಡಬ್ಲ್ಯೂಡಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಂಬಂಧಿಕರ ವಿರುದ್ಧ ದೂರು ನೀಡಿದ್ದ ರಾಹುಲ್ ಶರ್ಮಾ ಮೇಲೆ ..
ರಾಹುಲ್ ಶರ್ಮಾ
ರಾಹುಲ್ ಶರ್ಮಾ
ನವದೆಹಲಿ: ಪಿಡಬ್ಲ್ಯೂಡಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಂಬಂಧಿಕರ ವಿರುದ್ಧ  ದೂರು ನೀಡಿದ್ದ ರಾಹುಲ್ ಶರ್ಮಾ ಮೇಲೆ ಗುಂಡಿನ ದಾಳಿ ನಡೆದಿದೆ.
ಬೈಕ್​ ನಲ್ಲಿ ಬಂದ ಇಬ್ಬರು ಅರಿಚಿತರು ರಾಹುಲ್​ ಶರ್ಮಾ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಅದೃಷ್ಟವಶಾತ್​​ ರಾಹುಲ್​ ಶರ್ಮಾ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಘಟನೆಯ ಸಂಪೂರ್ಣ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಎನ್​​ಜಿಒವೊಂದರ ಮುಖ್ಯಸ್ಥರಾಗಿದ್ದ ರಾಹುಲ್ ಶರ್ಮಾ, ಕೇಜ್ರಿವಾಲ್​ ಸಂಬಂಧಿ ಸುರೇಂದರ್​ ಕುಮಾರ್ ಬನ್ಸಾಲ್ ಸೇರಿದಂತೆ ಮೂವರ ವಿರುದ್ಧ 2015ರಲ್ಲಿ ಎಸಿಬಿಗೆ ದೂರು ನೀಡಿದ್ದರು. ಹೀಗಾಗಿ ದುಷ್ಕರ್ಮಿಗಳು ನಿನ್ನೆ ಸಂಜೆ ಶರ್ಮಾ ಅವರ ಹತ್ಯೆಗೆ ಯತ್ನಿಸಿದ್ದು ಗುಂಡಿನ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಈ ಸಂಬಂಧ ದೂರು ದಾಖಲಾಗಿದೆ.
ನಾನು ಘಜಿಯಾಬಾದ್​ಗೆ ಹೊರಟಾಗ ಮಧ್ಯಾಹ್ನ ಸುಮಾರು 12 ಗಂಟೆಗೆ ಗೌರ್ ಸಿಟಿಯಲ್ಲಿ ಸುಮಾರು 500-600 ಮೀಟರ್ ದೂರದಲ್ಲಿರುವ ಗೌರ್ ಇಂಟರ್ ನ್ಯಾಷನಲ್ ಶಾಲೆ ಬಳಿ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಬೈಕ್ ಮೇಲೆ 2 ಪುರುಷರು ನನ್ನ ಕಾರು ಅಡ್ಡಗಟ್ಟಿದರು. ಅವರು ಹೆಲ್ಮೆಟ್ ಧರಿಸಿದ್ದು, ನನಗೆ ಗುರುತು ಸಿಗಲಿಲ್ಲ ಎಂದು ಶರ್ಮಾ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com