ಪಾಕಿಸ್ತಾನದಿಂದ ಕದನ ವಿರಾಮ ಉಲ್ಲಂಘನೆ: ಭಾರತ ತೀವ್ರ ಖಂಡನೆ

ಜಮ್ಮು ಮತ್ತು ಕಾಶ್ಮೀರದ ಅಂತಾರಾಷ್ಟ್ರೀಯ ಗಡಿ ಪ್ರದೇಶದಲ್ಲಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿ ಪದೇ ಪದೇ ದಾಳಿ ಮಾಡುತ್ತಿರುವುದನ್ನು ಭಾರತ ತೀವ್ರವಾಗಿ ಖಂಡಿಸಿದೆ.
ಭಾರತ ಹಾಗೂ ಪಾಕಿಸ್ತಾನದ ಪ್ರಧಾನಮಂತ್ರಿಗಳ ಸಾಂದರ್ಭಿಕ ಚಿತ್ರ
ಭಾರತ ಹಾಗೂ ಪಾಕಿಸ್ತಾನದ ಪ್ರಧಾನಮಂತ್ರಿಗಳ ಸಾಂದರ್ಭಿಕ ಚಿತ್ರ
Updated on

ದೆಹಲಿ: ಜಮ್ಮು ಮತ್ತು ಕಾಶ್ಮೀರದ ಅಂತಾರಾಷ್ಟ್ರೀಯ ಗಡಿ ಪ್ರದೇಶದಲ್ಲಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿ ಪದೇ ಪದೇ ದಾಳಿ ಮಾಡುತ್ತಿರುವುದನ್ನು ಭಾರತ ತೀವ್ರವಾಗಿ ಖಂಡಿಸಿದೆ.

ಉಗ್ರರು ಭಾರತದೊಳಗೆ ನುಸುಳಲು ನೆರವಾಗುವ ದೃಷ್ಟಿಯಿಂದ ಪಾಕಿಸ್ತಾನ ಪದೇ ಪದೇ  ಕದನ ವಿರಾಮ ಉಲ್ಲಂಘಿಸುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರವೀಶ್ ಕುಮಾರ್  ಆರೋಪಿಸಿದ್ದಾರೆ.

ಅಗತ್ಯಬಿದ್ದರೆ ಮುಂದಿನ ವಾರ ದವೋಸ್ ನಲ್ಲಿ ಪ್ರಧಾನಮಂತ್ರಿ ನರೇಂದ್ರಮೋದಿ ಹಾಗೂ ಪಾಕಿಸ್ತಾನ ಪ್ರಧಾನಮಂತ್ರಿ ಶಯೀದ್ ಖಾಕ್ವನ್ ಅಬ್ಬಾಸಿ ನಡುವೆ ಮಾತುಕತೆ ನಡೆಸಬಹುದು ಎಂದು ಅವರು  ಹೇಳಿದ್ದಾರೆ.

ಪಾಕಿಸ್ತಾನದ ಕದನ ವಿರಾಮ ಉಲ್ಲಂಘನೆಯಿಂದ ಹಲವು ನಾಗರಿಕರು ಮತಪಟ್ಟಿದ್ದು, ಅಪಾರ ಪ್ರಮಾಣದ ಆಸ್ತಿ ಪಾಸ್ತಿ ನಷ್ಟ ಉಂಟಾಗಿದೆ. ಇದನ್ನು ತೀವ್ರವಾಗಿ ಖಂಡಿಸುವುದಾಗಿ ತಿಳಿಸಿದ್ದಾರೆ.


Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com