- Tag results for Assembly
![]() | ರಾಜ್ಯದಲ್ಲಿ ಬದಲಾವಣೆ ತರುವಂತೆ ತೆಲಂಗಾಣ ಮತದಾರರಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮನವಿನವೆಂಬರ್ 30 ರಂದು ನಡೆಯಲಿರುವ ತೆಲಂಗಾಣ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ, ಹಿರಿಯ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಮಂಗಳವಾರ ತಮ್ಮ ಪಕ್ಷವನ್ನು ಅಧಿಕಾರಕ್ಕೆ ತರುವ ಮೂಲಕ ಬದಲಾವಣೆಯನ್ನು ತರಲು ರಾಜ್ಯದ ಮತದಾರರಿಗೆ ಮನವಿ ಮಾಡಿದರು. |
![]() | ತೆಲಂಗಾಣ ಪತ್ರಿಕೆಗಳಲ್ಲಿ ಕರ್ನಾಟಕ ಸರ್ಕಾರದ ಜಾಹಿರಾತು: ಯಾವುದೇ ನಿಯಮಗಳನ್ನು ಉಲ್ಲಂಘಿಸಿಲ್ಲ ಎಂದ ಡಿಕೆ ಶಿವಕುಮಾರ್ಚುನಾವಣೆ ನಡೆಯಲಿರುವ ತೆಲಂಗಾಣದಲ್ಲಿನ ಪತ್ರಿಕೆಗಳಲ್ಲಿ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಕುರಿತು ನೀಡಿದ ಜಾಹೀರಾತುಗಳು ಯಾವುದೇ ನಿಯಮಗಳನ್ನು ಉಲ್ಲಂಘಿಸಿಲ್ಲ. ಏಕೆಂದರೆ, ಅವುಗಳಲ್ಲಿ ಮತ ಕೇಳಿಲ್ಲ ಎಂದು ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಂಗಳವಾರ ಹೇಳಿದ್ದಾರೆ. |
![]() | ತೆಲಂಗಾಣದಲ್ಲಿ ಕೆಸಿಆರ್ ಅಧಿಕಾರದಲ್ಲಿ ಇರಬೇಕೆಂದು ಪ್ರಧಾನಿ ನರೇಂದ್ರ ಮೋದಿ ಬಯಸಿದ್ದಾರೆ: ರಾಹುಲ್ ಗಾಂಧಿತೆಲಂಗಾಣದಲ್ಲಿ ಕೆ ಚಂದ್ರಶೇಖರ್ ರಾವ್ ಅವರು ಅಧಿಕಾರದಲ್ಲಿ ಇರಬೇಕೆಂದು ಪ್ರಧಾನಿ ನರೇಂದ್ರ ಮೋದಿ ಬಯಸುತ್ತಿದ್ದಾರೆ. ಈ ಮೂಲಕ ರಾಷ್ಟ್ರಮಟ್ಟದಲ್ಲಿ ಪ್ರಧಾನಿ ಕೆಸಿಆರ್ ಬೆಂಬಲದ ಲಾಭ ಪಡೆಯುತ್ತಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದರು. |
![]() | ಅಮಿತ್ ಶಾ ಬಂದು ಮನೆಯಲ್ಲಿ 2 ಗಂಟೆ ಕೂತು ಜೀವ ತೆಗೆದ್ರು; ಪ್ರಧಾನಿ ಮೋದಿ ದೆಹಲಿಗೆ ಕರೆಸಿ ಸ್ಪರ್ಧಿಸಲೆಬೇಕೆಂದರು!ಸ್ವತಃ ಅಮಿತ್ ಶಾ ಅವರೇ ಮನೆಗೆ ಬಂದು ಕೂತ್ಕೊಂಡು ಎರಡು ಕಡೆ ಚುನಾವಣೆಗೆ ನಿಲ್ಲಬೇಕು ಎಂದು ಹೇಳಿದರೆ ನಾನೇನು ಮಾಡ್ಲಿ ಹೇಳಿ ಸ್ವಾಮೀಜಿ..: ಹೀಗೆ ಸಿದ್ದಗಂಗಾ ಶ್ರೀಗಳ ಮುಂದೆ ಸೋಮಣ್ಣ ವಿಧಾನಸಭಾ ಚುನಾವಣೆಯ ಸೋಲಿನ ನೋವು ತೋಡಿಕೊಂಡಿದ್ದಾರೆ. |
![]() | ತೆಲಂಗಾಣ ವಿಧಾನಸಭೆ ಚುನಾವಣೆ: ಬಿಆರ್ಎಸ್ ಹಾಲಿ ಶಾಸಕ ಕಾಂಗ್ರೆಸ್ ಸೇರ್ಪಡೆತೆಲಂಗಾಣ ವಿಧಾನಸಭಾ ಚುನಾವಣೆಗೆ ಇನ್ನೂ ಕೇವಲ ಒಂದು ವಾರ ಬಾಕಿ ಇರುವಂತೆಯೇ ಬಿಆರ್ ಎಸ್ ಹಾಲಿ ಶಾಸಕ ಕೈ ಕೊಟ್ಟಿದ್ದು, ಶುಕ್ರವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. |
![]() | ತೆಲಂಗಾಣ: ಕೆಸಿಆರ್ಗೆ 4 ಸಾವಿರ ರೂ. ವೃದ್ಧಾಪ್ಯ ವೇತನ, ಜೈಲಿನಲ್ಲಿ 2BHK ಮನೆ ನೀಡಲಾಗುವುದು- ರೇವಂತ್ ರೆಡ್ಡಿಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರಿಗೆ 4,000 ರೂ. ವೃದ್ಧಾಪ್ಯ ವೇತನ ನೀಡಲಾಗುವುದು ಮತ್ತು ಚೆರ್ಲಪಲ್ಲಿ ಕೇಂದ್ರ ಕಾರಾಗೃಹದಲ್ಲಿ ಅವರಿಗೆ 2 BHK ಮನೆ ನಿರ್ಮಿಸಿಕೊಡುವುದಾಗಿ ಟಿಪಿಸಿಸಿ ಮುಖ್ಯಸ್ಥ ಎ ರೇವಂತ್ ರೆಡ್ಡಿ ಗುರುವಾರ ಹೇಳಿದ್ದಾರೆ. |
![]() | ತೆಲಂಗಾಣ ಚುನಾವಣೆ: ಕರ್ನಾಟಕದಲ್ಲಿ ವಿದ್ಯುತ್ ಸಮಸ್ಯೆ ಇಲ್ಲ; ಬಿಆರ್ಎಸ್ ಆರೋಪಗಳಿಗೆ ಕೆಜೆ ಜಾರ್ಜ್ ತಿರುಗೇಟುಕರ್ನಾಟಕದಲ್ಲಿ ವಿದ್ಯುತ್ ಸಮಸ್ಯೆ ಬಗ್ಗೆ ಬಿಆರ್ಎಸ್ ಆರೋಪಗಳಿಗೆ ಪ್ರತಿಕ್ರಿಯಿಸಿದ ಇಂಧನ ಸಚಿವ ಕೆಜೆ ಜಾರ್ಜ್, ತಮ್ಮ ರಾಜ್ಯದಲ್ಲಿ ಐದರಿಂದ ಹತ್ತು ದಿನಗಳನ್ನು ಹೊರತುಪಡಿಸಿ, ವಿದ್ಯುತ್ ಪೂರೈಕೆಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆ ಇಲ್ಲ ಎಂದು ಗುರುವಾರ ಹೇಳಿದ್ದಾರೆ. |
![]() | ಕರ್ನಾಟಕದಲ್ಲಿ ಕಾಂಗ್ರೆಸ್ ಚುನಾವಣಾ ಗ್ಯಾರಂಟಿಗಳನ್ನು ಜಾರಿಗೊಳಿಸಿಲ್ಲ, 'ಸುಳ್ಳು ಭರವಸೆ' ಬಗ್ಗೆ ಎಚ್ಚರದಿಂದಿರಿ: ಜೆಪಿ ನಡ್ಡಾಕರ್ನಾಟಕದಲ್ಲಿ ಕಾಂಗ್ರೆಸ್ ತನ್ನ ಚುನಾವಣಾ ಭರವಸೆಗಳನ್ನು ಅನುಷ್ಠಾನಗೊಳಿಸಿಲ್ಲ ಎಂದು ಆರೋಪಿಸಿರುವ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ತೆಲಂಗಾಣದಲ್ಲಿ ಕಾಂಗ್ರೆಸ್ ಮತ್ತು ಆಡಳಿತಾರೂಢ ಬಿಆರ್ಎಸ್ ಎರಡೂ ಜನರಿಗೆ ಸುಳ್ಳು ಭರವಸೆಗಳನ್ನು ನೀಡುತ್ತಿವೆ ಎಂದು ಗುರುವಾರ ದೂರಿದ್ದಾರೆ. |
![]() | ಪಿಎಂ ಅಂದರೆ ಪನೌತಿ (ಅದೃಷ್ಟಹೀನ) ಮೋದಿ ಎಂದರ್ಥ: ರಾಹುಲ್ ಗಾಂಧಿರಾಜಸ್ಥಾನ ಚುನಾವಣಾ ಪ್ರಚಾರದಲ್ಲಿ ಪ್ರಧಾನಿ ವಿರುದ್ಧ ರಾಹುಲ್ ಗಾಂಧಿ ಟೀಕಾ ಪ್ರಹಾರ ನಡೆಸಿದ್ದಾರೆ. ಪಿಎಂ ಅಂದರೆ ಪನೌತಿ (ಅದೃಷ್ಟಹೀನ ಎಂಬ ಅರ್ಥ) ಮೋದಿ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. |
![]() | ರಾಜಸ್ಥಾನ ಚುನಾವಣೆಗೆ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ; ಜಾತಿ ಸಮೀಕ್ಷೆ, ಬಡ್ಡಿರಹಿತ ಕೃಷಿ ಸಾಲ ಸೇರಿ ಹಲವು ಭರವಸೆರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಮಂಗಳವಾರ ರಾಜ್ಯ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಜಾತಿ ಸಮೀಕ್ಷೆ, ರೈತರಿಗೆ 2 ಲಕ್ಷದವರೆಗೆ ಬಡ್ಡಿರಹಿತ ಸಾಲ ಮತ್ತು 10 ಲಕ್ಷ ಉದ್ಯೋಗಾವಕಾಶಗಳ ಭರವಸೆ ನೀಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸತತ ಎರಡನೇ ಬಾರಿಗೆ ಅಧಿಕಾರಕ್ಕೇರುವ ಇಂಗಿತ ಹೊಂದಿದೆ. |
![]() | ಮಧ್ಯ ಪ್ರದೇಶ ಚುನಾವಣೆ: ಅಟೆರ್ ಕ್ಷೇತ್ರದ ಬೂತ್ನಲ್ಲಿ ಮರು ಮತದಾನಕ್ಕೆ ಆದೇಶಭಾರತೀಯ ಚುನಾವಣಾ ಆಯೋಗ(ಇಸಿಐ) ಮಧ್ಯಪ್ರದೇಶದ ಭಿಂಡ್ ಜಿಲ್ಲೆಯ ಅಟೆರ್ ವಿಧಾನಸಭಾ ಕ್ಷೇತ್ರದ ಮತಗಟ್ಟೆಯೊಂದರಲ್ಲಿ ನವೆಂಬರ್ 21 ರಂದು ಮರು ಮತದಾನಕ್ಕೆ ಆದೇಶಿಸಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. |
![]() | ರಾಜಸ್ಥಾನ ಕಾಂಗ್ರೆಸ್ ಕ್ರಿಕೆಟ್ ತಂಡದಂತಿದ್ದು, ಒಬ್ಬರನ್ನೊಬ್ಬರು ರನ್ ಔಟ್ ಮಾಡಲು ಯತ್ನಿಸುತ್ತಿರುತ್ತಾರೆ: ಪ್ರಧಾನಿ ಮೋದಿರಾಜಸ್ಥಾನ ಕಾಂಗ್ರೆಸ್ ಕ್ರಿಕೆಟ್ ತಂಡದಂತಿದ್ದು, ಅವರ ಬ್ಯಾಟ್ಸ್ಮನ್ಗಳು ಐದು ವರ್ಷಗಳ ಕಾಲ ಪರಸ್ಪರ ರನ್ ಔಟ್ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದ್ದಾರೆ. |
![]() | ಮಧ್ಯ ಪ್ರದೇಶ ಚುನಾವಣೆ: 340 ಕೋಟಿ ರೂ. ಮೌಲ್ಯದ ನಗದು, ಡ್ರಗ್ಸ್, ಚಿನ್ನಾಭರಣ ವಶಮಧ್ಯಪ್ರದೇಶದಲ್ಲಿ ಅಕ್ಟೋಬರ್ 9 ರಂದು ರಾಜ್ಯ ವಿಧಾನಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿಯಾದಾಗಿನಿಂದ ಇಲ್ಲಿಯವರೆಗೂ ರೂ. 40.18 ಕೋಟಿ ನಗದು, 17 ಕೋಟಿಗೂ ಹೆಚ್ಚು ಮೌಲ್ಯದ ಮಾದಕ ದ್ರವ್ಯಗಳು, ಮದ್ಯ, ಚಿನ್ನಾಭರಣ ಸೇರಿದಂತೆ ಒಟ್ಟು 280 ಕೋಟಿ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. |
![]() | ಮಧ್ಯ ಪ್ರದೇಶದಲ್ಲಿ ದಾಖಲೆಯ ಶೇ.73 ಹಾಗೂ ಛತ್ತೀಸಗಢದಲ್ಲಿ ದಾಖಲೆಯ ಶೇ.68.15 ಮತದಾನ!ಇಂದು ನಡೆದ ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ದಾಖಲೆಯ ಶೇಕಡ 73.01ರಷ್ಟು ಮತದಾನವಾಗಿದೆ. ಛತ್ತೀಸ್ಗಢದ 70 ಸ್ಥಾನಗಳಲ್ಲಿ ಶೇ.69.78ರಷ್ಟು ಮತದಾನವಾಗಿದೆ. |
![]() | ವಿಧಾನಸಭೆ ವಿರೋಧ ಪಕ್ಷ ನಾಯಕನಾಗಿ ಆರ್ ಅಶೋಕ್ ಆಯ್ಕೆ: ಬಿಜೆಪಿ ಹಿರಿಯ ನಾಯಕರು ಏನೆಂದರು?ಅಂತೂ ಇಂತೂ ವಿಧಾನಸಭೆ ವಿರೋಧ ಪಕ್ಷದ ನಾಯಕನ ನೇಮಕವಾಗಿದೆ. ಬೆಂಗಳೂರಿನ ಪದ್ಮನಾಭನಗರ ಕ್ಷೇತ್ರದಿಂದ 4 ಬಾರಿ ಶಾಸಕರಾಗಿರುವ ಆರ್ ಅಶೋಕ್ ಅವರನ್ನು ವಿರೋಧ ಪಕ್ಷದ ನಾಯಕನನ್ನಾಗಿ ಹೈಕಮಾಂಡ್ ಆಯ್ಕೆ ಮಾಡಿ ನೇಮಿಸಿದೆ. ಇದಕ್ಕೆ ಬೆಂಗಳೂರಿನಲ್ಲಿ ಶುಕ್ರವಾರ ನಡೆದ ಶಾಸಕಾಂಗ ಪಕ್ಷ ಸಭೆಯಲ್ಲಿ ಶಾಸಕರೆಲ್ಲಾ ಒಪ್ಪಿಕೊಂಡಿದ್ದಾರೆ. |