- Tag results for Ballary
![]() | ಬರಪೀಡಿತ ಬಳ್ಳಾರಿ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಬಾಲ್ಯ ವಿವಾಹ: ಜಿಲ್ಲಾಡಳಿತದಿಂದ ಕಾರ್ಯಪಡೆ ರಚನೆಸರಕಾರದಿಂದ ಸಿಗುವ ಅಲ್ಪಸ್ವಲ್ಪ ನೆರವಿನಿಂದ ಸರಿಯಾಗಿ ಜೀವನ ನಡೆಸಲು ಸಾಧ್ಯವಾಗದೆ ಬರಪೀಡಿತ ಬಳ್ಳಾರಿ ಜಿಲ್ಲೆಯ ಹಲವು ಗ್ರಾಮಗಳ ಜನರು ಕೆಲಸ ಅರಸಿ ನಗರ, ಪಟ್ಟಣಗಳಿಗೆ ವಲಸೆ ಹೋಗುವ ಸಲುವಾಗಿ ತಮ್ಮ ಅಪ್ರಾಪ್ತ ವಯಸ್ಸಿನ ಹೆಣ್ಣು ಮಕ್ಕಳಿಗೆ ಮದುವೆ ಮಾಡುವ ಸನ್ನಿವೇಶವಿದೆ. |
![]() | ಬಳ್ಳಾರಿಯಲ್ಲಿ ಆಘಾತಕಾರಿ ಘಟನೆ; ಕಾಲೇಜು ವಿದ್ಯಾರ್ಥಿನಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರಬಳ್ಳಾರಿ ಜಿಲ್ಲೆಯಲ್ಲಿ ಕಾಲೇಜು ವಿದ್ಯಾರ್ಥಿನಿಯನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ನಡೆದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಸಂತ್ರಸ್ತೆ- ಬಿಕಾಂ ವಿದ್ಯಾರ್ಥಿನಿ ನಾಲ್ವರ ವಿರುದ್ಧ ಬಳ್ಳಾರಿ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದು, ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಗಳಿಗಾಗಿ ಶೋಧ ಕಾರ್ಯ ಕೈಗೊಂಡಿದ್ದಾರೆ. |
![]() | ಭೀಕರ ಬರ: ಬಳ್ಳಾರಿ ಜಿಲ್ಲೆಯಲ್ಲಿ 73 ಸಾವಿರ ಹೆಕ್ಟೇರ್ ಗಿಂತಲೂ ಅಧಿಕ ಕೃಷಿ ಭೂಮಿಯಲ್ಲಿ ಬೆಳೆ ನಷ್ಟ!ಜಿಲ್ಲೆಯಲ್ಲಿ ಬರಗಾಲಕ್ಕೆ ತುತ್ತಾಗಿರುವ 73,813 ಹೆಕ್ಟೇರ್ ಕೃಷಿ ಭೂಮಿಯನ್ನು ಸಮೀಕ್ಷೆ ನಡೆಸಿ ಜಿಲ್ಲಾಡಳಿತ ಗುರುತಿಸಿದೆ. ರಾಜ್ಯ ಸರಕಾರಕ್ಕೆ ಆಡಳಿತ ಕಳುಹಿಸಿರುವ ವರದಿ ಪ್ರಕಾರ 569 ಕೋಟಿ ರೂಪಾಯಿಗಳಷ್ಟು ಬೆಳೆ ನಷ್ಟವಾಗಿದ್ದು, ಜಿಲ್ಲೆಯಲ್ಲಿ ಕಳೆದ ಹತ್ತು ವರ್ಷಗಳಲ್ಲಿಯೇ ಅತಿ ಹೆಚ್ಚು ಬೆಳೆ ನಷ್ಟವಾಗಿದೆ. |
![]() | ಮತಗಟ್ಟೆಯಲ್ಲಿ ಮಗುವಿಗೆ ಜನ್ಮ ನೀಡಿದ ತಾಯಿ: ಬಳ್ಳಾರಿಯಲ್ಲೊಂದು ಅಪರೂಪದ ಘಟನೆ!16ನೇ ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ಮತದಾನ ಮುಕ್ತಾಯವಾಗಲು ಇನ್ನು ಕೆಲವೇ ನಿಮಿಷಗಳು ಬಾಕಿ ಉಳಿದಿವೆ. ಇಂದು ಮತದಾನ ವೇಳೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕುತೂಹಲಕಾರಿ ಘಟನೆಗಳು ನಡೆದಿದೆ. |
![]() | ಬಳ್ಳಾರಿಯ ಜೆಡಿಎಸ್ ಅಭ್ಯರ್ಥಿ ದಿಢೀರ್ ಬದಲು; ಪಕ್ಷಕ್ಕೆ ಸೇರ್ಪಡೆಗೊಂಡ ಅನಿಲ್ ಲಾಡ್'ಗೆ ಟಿಕೆಟ್!ಕಾಂಗ್ರೆಸ್'ನಲ್ಲಿ ಬಂಡಾಯದ ಬಾವುಟ ಹಾರಿಸಿದ್ದ ಬಳ್ಳಾರಿ ನಗರ ಕ್ಷೇತ್ರದ ಟಿಕೆಟ್ ಆಕಾಂಕ್ಷಿ, ಮಾಜಿ ಶಾಸಕ ಅನಿಲ್ ಲಾಡ್ ಅವರು, ಮಂಗಳವಾರ ತಡರಾತ್ರಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. |
![]() | ವಿಧಾನಸಭೆ ಚುನಾವಣೆ: ಉಡುಗೊರೆ ಫಲಾನುಭವಿಗಳ ಗುರುತಿಸಲು ಮನೆಗಳ ಮೇಲೆ ಇಂಗ್ಲಿಷ್ ಅಕ್ಷರಗಳಿಂದ ಗುರುತು!ಬಳ್ಳಾರಿ ಜಿಲ್ಲೆಯ ಕಂಪ್ಲಿ ಪಟ್ಟಣದ ಹಲವಾರು ಬಡಾವಣೆಗಳ ನಿವಾಸಿಗಳು ತಮ್ಮ ಮನೆಯ ಬಾಗಿಲು, ಪೈಪ್ಗಳು ಮತ್ತು ಗೋಡೆಗಳ ಮೇಲೆ ಕೆಲವು ಗುರುತುಗಳನ್ನು ಕಂಡು ತಬ್ಬಿಬ್ಬಾಗಿದ್ದು ಸುಳ್ಳಲ್ಲ. ಹತ್ತಿರದಿಂದ ಪರಿಶೀಲಿಸಿ ನೋಡಿದಾಗ ಅಲ್ಲಿ ವರ್ಣಮಾಲೆಗಳಿದ್ದವು, ಪ್ರತಿಯೊಂದು ಅಕ್ಷರಗಳೂ ಮನೆಯಿಂದ ಮನೆಗೆ ಭಿನ್ನವಾಗಿದ್ದವು. |
![]() | ಬಳ್ಳಾರಿಯಲ್ಲಿ ಹುಚ್ಚು ನಾಯಿ ಕಡಿತದಿಂದ ಮತ್ತೊಂದು ಮಗು ಸಾವುಕೌಲ್ ಬಜಾರ್ ಪ್ರದೇಶದ ವಟ್ಟಪ್ಪಗೇರಿಯಲ್ಲಿ ಹುಚ್ಚು ನಾಯಿಯಿಂದ ಕಡಿತಕ್ಕೊಳಗಾಗಿದ್ದ ಮೂರು ವರ್ಷದ ಬಾಲಕಿ ಮೃತಪಟ್ಟಿದ್ದಾಳೆ. |
![]() | ಗಣಿನಾಡು ಬಳ್ಳಾರಿ ಜಿಲ್ಲೆಯ ಸಂಡೂರಿಗೆ ಇಂದು ಅಮಿತ್ ಶಾ ಆಗಮನ: ಚುನಾವಣೆ ಗೆಲುವಿಗೆ ತಂತ್ರವಿಧಾನಸಭೆ ಚುನಾವಣೆಗೆ ದಿನ ಹತ್ತಿರವಾಗುತ್ತಿದ್ದಂತೆ ಕರ್ನಾಟಕಕ್ಕೆ ಬಿಜೆಪಿ ಕೇಂದ್ರ ನಾಯಕರ ಭೇಟಿ ಹೆಚ್ಚಾಗುತ್ತಿದೆ. ಬಿಜೆಪಿಯ ಚುನಾವಣಾ ಚಾಣಕ್ಯ ಎಂದೇ ಹೆಸರಾಗಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಇಂದು ಗಣಿನಾಡು ಬಳ್ಳಾರಿಗೆ ಆಗಮಿಸಲಿದ್ದಾರೆ. |
![]() | ಬಳ್ಳಾರಿ ಉತ್ಸವಕ್ಕೆ ಹಾಡಲು ಬಂದ ತೆಲುಗು ಮೂಲದ ಗಾಯಕಿ ಮಂಗ್ಲಿ ಕಾರಿನ ಮೇಲೆ ಕಲ್ಲು ತೂರಾಟ-ಮೇಕಪ್ ರೂಂಗೆ ನುಗ್ಗಿ ದಾಂಧಲೆ ಮಾಡಿದ ಪುಂಡರುತೆಲುಗು ಮೂಲದ ಇತ್ತೀಚೆಗೆ ಕನ್ನಡದಲ್ಲಿಯೂ ಖ್ಯಾತಿ ಗಳಿಸುತ್ತಿರುವ ಗಾಯಕಿ ಮಂಗ್ಲಿ ಕಾರಿನ ಮೇಲೆ ಬಳ್ಳಾರಿಯಲ್ಲಿ ಕಳೆದ ರಾತ್ರಿ ಕಲ್ಲು ತೂರಾಟ ನಡೆದ ಘಟನೆ ನಡೆದಿದೆ. |
![]() | ಬಳ್ಳಾರಿಯ 1 ರೂಪಾಯಿ ಭಿಕ್ಷುಕನ ಅಂತ್ಯಕ್ರಿಯೆಗೆ 4 ಸಾವಿರಕ್ಕೂ ಹೆಚ್ಚು ಜನ!ತಬ್ಬಲಿಯಾಗಿ ಬೆಳೆದ ವ್ಯಕ್ತಿ ಆತ. ಬಸ್ ನಿಲ್ದಾಣದ ಹತ್ತಿರವಿರುವ ಸಣ್ಣ ಶೆಡ್ ಕಳೆದ ನಾಲ್ಕು ದಶಕಗಳಿಂದ ಆತನ ಆಶ್ರಯ ತಾಣ. ಮಾನಸಿಕ ಅಸ್ವಸ್ಥನಾಗಿದ್ದ ಆತ ಜೀವನೋಪಾಯಕ್ಕೆ ಭಿಕ್ಷೆ ಬೇಡುತ್ತಿದ್ದ. ರಸ್ತೆ ಅಪಘಾತವೊಂದರಲ್ಲಿ ಎರಡು ದಿನಗಳ ಹಿಂದೆ ಮೃತಪಟ್ಟ ಆತನ ಅಂತ್ಯಕ್ರಿಯೆಗೆ ಸಾವಿರಾರು ಜನ ಸೇರಿದ್ದರು. |