- Tag results for By election
![]() | ಪಕ್ಷ ಸಂಘಟನೆಯ ಕೊರತೆಯೇ ಜೆಡಿಎಸ್ ಸೋಲಿಗೆ ಕಾರಣ: ಹೆಚ್ ಡಿ ಕುಮಾರಸ್ವಾಮಿಸಿಂದಗಿ ಮತ್ತು ಹಾನಗಲ್ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳು ಹೀನಾಯ ಸೋಲು ಕಂಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಜೆಡಿಎಸ್ ನಾಯಕ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ಕಾರ್ಯಕರ್ತರ ಒತ್ತಾಸೆ ಮೇರೆಗೆ ಅಭ್ಯರ್ಥಿಗಳನ್ನು ಸ್ಪರ್ಧೆಗೆ ನಿಲ್ಲಿಸಿದ್ದೆವು ಹೊರತು ನಮಗೆ ಈ ಫಲಿತಾಂಶದ ಬಗ್ಗೆ ತಿಳಿದಿತ್ತು ಎಂದು ಹೇಳಿದ್ದಾರೆ. |
![]() | ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ ಭರ್ಜರಿ ಗೆಲುವು! 30,836 ಮತಗಳ ಅಂತರದಿಂದ ಭಾರಿ ಜಯಸಿಂದಗಿ ಕ್ಷೇತ್ರದ ಉಪ ಚುನಾವಣೆಯ 22 ಸುತ್ತಿನ ಮತ ಎಣಿಕೆಯಲ್ಲಿ ಎಲ್ಲಾ ಸುತ್ತುಗಳಲ್ಲಿ ಮುನ್ನಡೆ ಸಾಧಿಸಿಕೊಂಡು ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ 30 ಸಾವಿರಕಕೂ ಅಧಿಕ ಮತಗಳ ಅಂತರದಿಂದ ಭರ್ಜರಿ ಜಯ ಸಾಧಿಸಿದ್ದಾರೆ. |
![]() | ಹಾನಗಲ್ ಕ್ಷೇತ್ರದಲ್ಲಿ ಹಿಂದಿನಿಂದಲೂ ಸ್ಪರ್ಧೆಯ ತೀವ್ರತೆ ಹೆಚ್ಚು, ಅಂತಿಮವಾಗಿ ಬಿಜೆಪಿಯೇ ಗೆಲ್ಲುತ್ತದೆ: ಸಿಎಂ ಬೊಮ್ಮಾಯಿಹಾನಗಲ್ ನಲ್ಲಿ ಇನ್ನೂ ಅರ್ಧಕ್ಕಿಂತ ಹೆಚ್ಚು ಮತಗಳ ಎಣಿಕೆ ಬಾಕಿಯಿದೆ, ಆರಂಭದಲ್ಲಿ ನಾವು ಹಿನ್ನೆಡೆಯಲ್ಲಿದ್ದರೂ ಕಾಂಗ್ರೆಸ್ ಅಭ್ಯರ್ಥಿ ಅಲ್ಪಮತಗಳ ಮುನ್ನಡೆಯನ್ನು ಸಾಧಿಸಿದ್ದಾರೆ, ಹೀಗಾಗಿ ನಾವು ಗೆಲ್ಲುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. |
![]() | ಹಾನಗಲ್-ಸಿಂದಗಿ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸವಿದೆ: ಸಿಎಂ ಬಸವರಾಜ ಬೊಮ್ಮಾಯಿಹಾನಗಲ್ ಮತ್ತು ಸಿಂದಗಿ ಎರಡೂ ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸ ನಮಗಿನ್ನೂ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. |
![]() | ಹಾನಗಲ್-ಸಿಂದಗಿ ಉಪ ಚುನಾವಣೆ: ಮತ ಎಣಿಕೆ ಆರಂಭ, ಮಧ್ಯಾಹ್ನ ವೇಳೆಗೆ ಫಲಿತಾಂಶ ಪ್ರಕಟರಾಜ್ಯದ ಆಡಳಿತಾರೂಢ ಬಿಜೆಪಿ, ವಿರೋಧ ಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಗೆ ಪ್ರತಿಷ್ಠೆಯ ಕಣವಾಗಿರುವ ಸಿಂದಗಿ ಮತ್ತು ಹಾನಗಲ್ ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶ ಮಂಗಳವಾರ ಮಧ್ಯಾಹ್ನ ಹೊತ್ತಿಗೆ ಹೊರಬೀಳಲಿದೆ. ಇನ್ನು ಕೆಲವೇ ಕ್ಷಣಗಳಲ್ಲಿ ಮತ ಎಣಿಕೆ ಕಾರ್ಯ ಆರಂಭವಾಗಿದೆ. |
![]() | ಸಿಎಂ ವೃತ್ತಿ ಜೀವನದ ಮೊದಲ ಚುನಾವಣೆ: ಕ್ಷೇತ್ರದಲ್ಲಿ ಬೀಡು ಬಿಟ್ಟ ಬೊಮ್ಮಾಯಿ, ಪ್ರತಿಷ್ಠೆಯಾಯಿತೇ ಉಪ ಚುನಾವಣೆ?ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಿಎಂ ಆದ ಬಳಿಕ ಎದುರಿಸುತ್ತಿರುವ ಮೊದಲ ಚುನಾವಣೆ ಇದಾಗಿದ್ದು, ಹೀಗಾಗಿ ಅವರಿಗೆ ಹಾನಗಲ್ ಮತ್ತು ಸಿಂದಗಿ ಉಪಚುನಾವಣೆ ಮಹತ್ವದ್ದಾಗಿದೆ. |
![]() | ಬದಲಾವಣೆಯ ಗಾಳಿ ಬೀಸುವ ನಿರೀಕ್ಷೆಯಲ್ಲಿ ಹಾನಗಲ್ ಕ್ಷೇತ್ರದ ಮತದಾರರು: ಕೃಷಿ, ಕೈಗಾರಿಕೆಗಳ ಉತ್ತೇಜನಕ್ಕೆ ಬೇಡಿಕೆಹಾವೇರಿ ಜಿಲ್ಲೆಯ ಅರೆ ಮಲೆನಾಡು ತಾಲ್ಲೂಕು ಹಾನಗಲ್ ಮಲೆನಾಡು ಮತ್ತು ಬಯಲುಸೀಮೆ ಸಂಸ್ಕೃತಿಯನ್ನು ಹಂಚಿಕೊಂಡಿದೆ. ಆದರೆ ರಾಜಕೀಯವಾಗಿ ಬಂದಾಗ ಮತದಾರರು ಈ ಹಿಂದೆ ಜನತಾ ದಳದಿಂದ ಬಿಜೆಪಿಗೆ ಬಂದ ಸಿ ಎಂ ಉದಾಸಿ ಮತ್ತು ಕಾಂಗ್ರೆಸ್ ನ ಮನೋಹರ್ ತಹಶಿಲ್ದಾರ್ ಅವರಿಗೆ ಅಂಟಿಕೊಂಡಿದ್ದರು. |
![]() | ಸಿಂದಗಿ-ಹಾನಗಲ್ ಕ್ಷೇತ್ರಗಳ ಉಪ ಚುನಾವಣೆ: ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ ತೆರೆ, ಮೂರೂ ಪಕ್ಷಗಳಿಗೆ ಪ್ರತಿಷ್ಠೆಯ ಕಣರಾಜ್ಯದ ಪ್ರಮುಖ ಮೂರು ಪಕ್ಷಗಳಿಗೆ ತೀವ್ರ ಜಿದ್ದಾಜಿದ್ದಿನ ಕಣವಾಗಿರುವ ಹಾನಗಲ್ ಮತ್ತು ಸಿಂದಗಿ ಕ್ಷೇತ್ರಗಳ ಉಪ ಚುನಾವಣೆಗೆ ಬಹಿರಂಗ ಪ್ರಚಾರಕ್ಕೆ ಬುಧವಾರ ಸಾಯಂಕಾಲ 7 ಗಂಟೆಗೆ ತೆರೆ ಬೀಳಲಿದೆ. |
![]() | "ಕಂಬಳಿ ಹಾಕಿಕೊಳ್ಳ ಬೇಕಾದರೆ ಯೋಗ್ಯತೆ ಇರಬೇಕು": ಸಿಎಂ ಬೊಮ್ಮಾಯಿಉಣ್ಣೆಯನ್ನು ನೇಯ್ದು ಕಂಬಳಿ ಮಾಡಲಾಗುತ್ತದೆ. ಇದರ ಹಿಂದೆ ಹಾಲುಮತದ ಗೌರವ ಮತ್ತು ಪರಿಶ್ರಮ ಅಡಗಿದೆ. ಕಂಬಳಿ ಹೊದ್ದುಕೊಳ್ಳಲು ಯೋಗ್ಯತೆ ಇರಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. |
![]() | ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ, ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನ ತತ್ತರಿಸಿ ಹೋಗಿದ್ದಾರೆ: ಸಿದ್ದರಾಮಯ್ಯಹಾನಗಲ್ ಮತ್ತು ಸಿಂದಗಿಯಲ್ಲಿ ಕಾಂಗ್ರೆಸ್ ಪರವಾದ ಅಲೆಯಿದೆ, ಎರಡೂ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಜನರು ಕಾಂಗ್ರೆಸ್ ಪರ ಮತ ಹಾಕಲಿದ್ದಾರೆ. ಹಾಗಾಗಿ ಗೆಲುವು ನಮ್ಮದೇ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. |
![]() | ಉಪ ಚುನಾವಣೆ ಪ್ರಚಾರ: ಅಕ್ಟೋಬರ್ 17ರಂದು ಸಿಂದಗಿಯಲ್ಲಿ ಸಿಎಂ ಬೊಮ್ಮಾಯಿ ಪ್ರಚಾರಉಪಚುನಾವಣಾ ಪ್ರಚಾರಕ್ಕೆ ಬಿರುಸು ನೀಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇದೇ 17ರಂದು ಸಿಂಧಗಿಯಲ್ಲಿ ಪಕ್ಷದ ಅಭ್ಯರ್ಥಿ ಪರ ಪ್ರಚಾರಕ್ಕೆ ಧುಮುಕಲಿದ್ದಾರೆ. |
![]() | ಸಿಎಂ ಬೊಮ್ಮಾಯಿ ಸರ್ಕಾರದ ಯೋಜನೆಗಳನ್ನು ಮುಂದಿಟ್ಟು ಹಾನಗಲ್, ಸಿಂಧಗಿ ಉಪ ಚುನಾವಣೆಯಲ್ಲಿ ಸ್ಪರ್ಧೆ, ಗೆಲ್ಲುವ ವಿಶ್ವಾಸ: ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಉತ್ತಮವಾಗಿ ಆಡಳಿತ ನಡೆಸುತ್ತಿದೆ. ಬೊಮ್ಮಾಯಿಯವರ ನೇತೃತ್ವದಲ್ಲಿ ಮುಂಬರುವ ಸಿಂದಗಿ ಮತ್ತು ಹಾನಗಲ್ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ನಮ್ಮ ಪಕ್ಷ ಗೆಲ್ಲಲಿದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ. |
![]() | ಪಶ್ಚಿಮ ಬಂಗಾಳದ ಭವಾನಿಪುರ ಕ್ಷೇತ್ರದ ಉಪ ಚುನಾವಣೆ: ಮತ ಎಣಿಕೆ ಆರಂಭ, ಇಂದು ಸಿಎಂ ಮಮತಾ ಬ್ಯಾನರ್ಜಿ ಭವಿಷ್ಯ ನಿರ್ಧಾರಇಂದು ಅಕ್ಟೋಬರ್ 3 ಭಾನುವಾರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ರಾಜಕೀಯ ಭವಿಷ್ಯ ನಿರ್ಧಾರವಾಗುವ ದಿನ. |
![]() | ಟಿಕೆಟ್ ಪಡೆಯಲು ನಮಗೂ ಗಂಡಸುತನ ಇದೆ: ಮಾಜಿ ಸಚಿವ ಮನೋಹರ್ ತಹಶೀಲ್ದಾರ್ಉಪಚುನಾವಣೆ ಘೋಷಣೆಯಾಗುತ್ತಿದ್ದಂತೆ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕೈ ಅಭ್ಯರ್ಥಿಗಳು ನಾಮುಂದು ತಾಮುಂದು ಎನ್ನುತ್ತಿದ್ದು, ಮಾಜಿ ಸಚಿವ ಟಿಕೆಟ್ ಆಕಾಂಕ್ಷಿ ಮನೋಹರ್ ತಹಶೀಲ್ದಾರ್ ಒಂದು ಹೆಜ್ಜೆ ಮುಂದು ಹೋಗಿ ಗಂಡಸುತನದ ಬಗ್ಗೆ ಮಾತನಾಡಿದ್ದಾರೆ. |
![]() | ಭವಾನಿಪುರ ಉಪಚುನಾವಣೆ: ಮತದಾರರ ಪಟ್ಟಿಯಲ್ಲಿ ಹೊರಗಿನ ಪ್ರಶಾಂತ್ ಕಿಶೋರ್ ಹೆಸರು ಸೇರ್ಪಡೆ- ಬಿಜೆಪಿಪಶ್ಚಿಮ ಬಂಗಾಳದಲ್ಲಿ ಮಹತ್ವದ ಭವಾನಿಪುರ ಕ್ಷೇತ್ರದ ಉಪ ಚುನಾವಣೆ ಮುಂದಿರುವಂತೆಯೇ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ಪರ್ಧಿಸುತ್ತಿರುವ ಕ್ಷೇತ್ರದಲ್ಲಿ ಟಿಎಂಸಿ ಚುನಾವಣಾ ಸಲಹೆಗಾರ ಪ್ರಶಾಂತ್ ಕಿಶೋರ್ ಹೆಸರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿದೆ ಎಂದು ಬಿಜೆಪಿ ಹೇಳಿದೆ. |