social_icon
  • Tag results for Experts

ಪ್ರಚಾರದ ವೇಳೆ ಜನರಿಗೆ ಉಡುಗೊರೆ ನೀಡುವ ಬದಲು ಆರೋಗ್ಯ ತಪಾಸಣೆಗಳ ನಡೆಸಿ: ರಾಜಕೀಯ ನಾಯಕರಿಗೆ ತಜ್ಞರ ಸಲಹೆ

ಚುನಾವಣಾ ಹೊಸ್ತಿಲಿನಲ್ಲಿರುವ ರಾಜ್ಯದಲ್ಲಿ ಪ್ರಚಾರ ನಡೆಸುತ್ತಿರುವ ರಾಜಕೀಯ ನಾಯಕರು, ಜನರಿಗೆ ಉಡುಗೊರೆಗಳ ನೀಡುವ ಬದಲು ಹೃದ್ರೋಗ, ಮಧುಮೇಹ ಮತ್ತು ನೆಫ್ರಾಲಜಿ ಕ್ಷೇತ್ರದ ಆರೋಗ್ಯ ವೃತ್ತಿಪರರೊಂದಿಗೆ ಉಚಿತ ಆರೋಗ್ಯ ತಪಾಸಣೆಗಳ ನಡೆಸಿ ಎಂದು ರಾಜಕೀಯ ನಾಯಕರಿಗೆ ತಜ್ಞರು ಸಲಹೆ ನೀಡಿದ್ದಾರೆ.

published on : 22nd March 2023

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ: ಟ್ರಾಫಿಕ್ ಇನ್ನಷ್ಟು ಹದಗೆಡುತ್ತದೆ; IISc ತಜ್ಞರ ಆತಂಕ; ಕಾರಣ ಏನು ಗೊತ್ತಾ?

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಗೆ ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕೃತವಾಗಿ ಚಾಲನೆ ನೀಡಿದ್ದು, ಟ್ರಾಫಿಕ್ ಜಾಮ್ ಸಮಸ್ಯೆಗೆ ಪರಿಹಾರವಾಗಬೇಕಿದ್ದ ಹೆದ್ದಾರಿ ಇದೀಗ ಮೈಸೂರು-ಬೆಂಗಳೂರು ಅವಳಿ ನಗರದಲ್ಲಿ ಸಂಚಾರ ದಟ್ಟಣೆಯನ್ನು ಇನ್ನಷ್ಟು ಹದಗೆಡಿಸುವ ಸಾಧ್ಯತೆಯಿದೆ ಎಂದು ಸಂಚಾರ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

published on : 13th March 2023

H3N2 ಆತಂಕಕಾರಿಯಲ್ಲ, ಮುನ್ನೆಚ್ಚರಿಕೆ ಅತ್ಯಗತ್ಯ; ಆರೋಗ್ಯ ಸಿಬ್ಬಂದಿಗೆ ಮಾಸ್ಕ್ ಕಡ್ಡಾಯ: ಸಚಿವ ಡಾ. ಕೆ.ಸುಧಾಕರ್

ರಾಜ್ಯದಲ್ಲಿ 26 ಹೆಚ್ 3ಎನ್ 2 ಸೋಂಕು ಪ್ರಕರಣ ಪತ್ತೆ  ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಅವರೊಂದಿಗೆ ತಜ್ಞರೊಂದಿಗೆ ಮಹತ್ವದ ಸಭೆ ನಡೆಸಿದರು. ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್ 3ಎನ್ 2 ವೈರಸ್ ಆತಂಕಕಾರಿಯಲ್ಲ, ಕರ್ತವ್ಯ ಸಮಯದಲ್ಲಿ ಎಲ್ಲಾ ಆರೋಗ್ಯ ಸಿಬ್ಬಂದಿಗೆ ಮಾಸ್ಕ್ ಕಡ್ಡಾಯಗೊಳಿಸಲು ನಿರ್ಧರಿಸಲಾಗಿದೆ ಎಂದರು.

published on : 6th March 2023

ಈ ಬಾರಿ ಬೇಸಿಗೆಯಲ್ಲಿ ತಾಪಮಾನ ಅಧಿಕ, ಮುಂಗಾರಿನಲ್ಲಿ ಉತ್ತಮ ಮಳೆ: ಹವಾಮಾನ ತಜ್ಞರು

ಮುಂಜಾನೆ ಮತ್ತು ರಾತ್ರಿ ಹೊತ್ತು ವಿಪರೀತ ಚಳಿ, ಬೆಳಗ್ಗೆ 10 ಗಂಟೆಯಾಗುತ್ತಿದ್ದಂತೆ ವಿಪರೀತ ಬಿಸಿಲು ಆರಂಭ, ಇದು ಸದ್ಯದ ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳ ತಾಪಮಾನ ಪರಿಸ್ಥಿತಿ. 

published on : 9th February 2023

ಕಾವೇರಿ ನದಿ ನೀರು ಹರಿವು ಕಡಿಮೆ ಮಾಡಿ ಭಕ್ತರ ರಕ್ಷಿಸಿ ಸರ್ಕಾರಕ್ಕೆ ಡಿಕೆ.ಶಿವಕುಮಾರ್ ಮನವಿ: ತಜ್ಞರ ಕಳವಳ

ರಾಮನಗರ ಮತ್ತು ಕನಕಪುರದಿಂದ ಪ್ರತಿ ವರ್ಷ ಶಿವರಾತ್ರಿಯಂದು ಮಲೆ ಮಹದೇಶ್ವರನ ಬೆಟ್ಟಕ್ಕೆ ಪಾದಯಾತ್ರೆ ಮೂಲಕ ತೆರಳುವ ಯಾತ್ರಾರ್ಥಿಗಳ ಸಂಚಾರಕ್ಕೆ ಅನುಕೂಲವಾಗುವಂತೆ ಕಾವೇರಿ ನದಿ ನೀರಿನ ಹರಿವನ್ನು ಕಡಿಮೆ ಮಾಡುವಂತೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

published on : 8th February 2023

ನಗರದಲ್ಲಿ ಪಾದಚಾರಿ ಮಾರ್ಗಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು: ತಜ್ಞರು

ನಾಗರಿಕರಿಗೆ ರಸ್ತೆ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು, ನಗರದ ವಾಹನಗಳ ಹೊರೆಯನ್ನು ಕಡಿಮೆ ಮಾಡಲು ಮತ್ತು ಪಾದಚಾರಿ ಮಾರ್ಗಗಳಿಗೆ ಆದ್ಯತೆ ನೀಡುವತ್ತ ರಾಜ್ಯ ಸರ್ಕಾರ ಕೆಲಸ ಮಾಡಬೇಕು ಎಂದು ಸಂಚಾರ ಅಧಿಕಾರಿಗಳು ಮತ್ತು ಸಾರಿಗೆ ತಜ್ಞರು ಸಲಹೆ ನೀಡಿದ್ದಾರೆ.

published on : 13th January 2023

ಅಭಿವೃದ್ಧಿ ಚಟುವಟಿಕೆಗಳನ್ನು ನಿಲ್ಲಿಸದಿದ್ದಲ್ಲಿ ಜೋಶಿಮಠದ ಪರಿಸ್ಥಿತಿ ಪಶ್ಚಿಮ ಮತ್ತು ಪೂರ್ವ ಘಟ್ಟಗಳಲ್ಲಿಯೂ ಎದುರಾಗಲಿದೆ: ತಜ್ಞರ ಎಚ್ಚರಿಕೆ

ಅಭಿವೃದ್ಧಿ ಚಟುವಟಿಕೆಗಳನ್ನು ನಿಲ್ಲಿಸದಿದ್ದಲ್ಲಿ ಉತ್ತರಾಖಂಡದ ಜೋಶಿಮಠದಲ್ಲಿ ಸಂಭವಿಸಿದ ದುರಂತವೇ ದುರ್ಬಲವಾದ ಪಶ್ಚಿಮ ಮತ್ತು ಪೂರ್ವ ಘಟ್ಟಗಳಲ್ಲಿಯೂ ಸಂಭವಿಸಲಿದೆ. ನಿರ್ಲಕ್ಷ್ಯ ತೋರದಿರಿ ಎಂದು ತಜ್ಞರು ಹಾಗೂ ಭೂವಿಜ್ಞಾನಿಗಳು ಎಚ್ಚರಿಕೆ ನೀಡಿದ್ದಾರೆ.

published on : 13th January 2023

ಸಂಚಾರ ಬಂದ್ ಮಾಡಿ, ಮೆಟ್ರೋ ನಿರ್ಮಾಣ ಕಾರ್ಯವನ್ನು ರಾತ್ರಿ ವೇಳೆ ಮಾಡಬೇಕು: ತಜ್ಞರು

ನಮ್ಮ ಮೆಟ್ರೊ ಕಾಮಗಾರಿಯಲ್ಲಿನ ಲೋಪದೋಷಗಳನ್ನು ಎತ್ತಿ ತೋರಿಸಿರುವ ತಜ್ಞರು ಮತ್ತು ಸಿವಿಲ್ ಎಂಜಿನಿಯರಿಂಗ್ ಸಲಹೆಗಾರರು ಸಂಚಾರ ಬಂದ್ ಮಾಡಿ, ಮೆಟ್ರೋ ನಿರ್ಮಾಣ ಕಾರ್ಯವನ್ನು ರಾತ್ರಿ ಸಮಯದಲ್ಲಿ ಮಾಡಬೇಕೆಂದು ಶಿಫಾರಸು ಮಾಡಿದ್ದಾರೆ.

published on : 12th January 2023

ಕರ್ನಾಟಕ ಕಾನೂನು ಪ್ರಾಧಿಕಾರ ಸ್ಥಾಪಿಸಿ: ರಾಜ್ಯ ಸರ್ಕಾರಕ್ಕೆ ಕಾನೂನು ತಜ್ಞರ ಆಗ್ರಹ

ಉನ್ನತ ನ್ಯಾಯಾಂಗದ ಮಹತ್ವದ ತೀರ್ಪುಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಮತ್ತು ಕನ್ನಡದಲ್ಲಿ ಕಾನೂನು ಪುಸ್ತಕಗಳ ಬರವಣಿಗೆ ಮತ್ತು ಪ್ರಕಟಣೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಕರ್ನಾಟಕ ಕಾನೂನು ಪ್ರಾಧಿಕಾರವನ್ನು ಸ್ಥಾಪಿಸಬೇಕು ಎಂದು ಕಾನೂನು ತಜ್ಞರು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

published on : 8th January 2023

ಶುರುವಾಯ್ತು ಕೋವಿಡ್ ಆತಂಕ: ಯೋಜನಾ ಮಾದರಿ ಸಿದ್ಧಪಡಿಸುವಂತೆ ತಜ್ಞರಿಗೆ ಸಿಎಂ ಬೊಮ್ಮಾಯಿ ಸೂಚನೆ

ಚೀನಾ ಮತ್ತು ಇತರ ದೇಶಗಳಲ್ಲಿ ಕೋವಿಡ್ -19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಯೋಜನಾ ಮಾದರಿ ಸಿದ್ಧಪಡಿಸುವಂತೆ ತಜ್ಞರಿಗೆ ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.

published on : 30th December 2022

'ವಯಸ್ಕರ ಸಾಕ್ಷರತಾ ಕಾರ್ಯಕ್ರಮ' ಯಶಸ್ವಿಯಾಗಲು ಮಾರ್ಗದರ್ಶನದ ಅಗತ್ಯವಿದೆ: ತಜ್ಞರು

2027 ರ ವೇಳೆಗೆ 5 ಕೋಟಿ ವಯಸ್ಕರಿಗೆ ಶಿಕ್ಷಣ ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರದ ನವ ಭಾರತ ಸಾಕ್ಷರತಾ ಕಾರ್ಯಕ್ರಮ (ವಯಸ್ಕರ ಶಿಕ್ಷಣ ಯೋಜನೆ)ವನ್ನು ಆರಂಭಿಸಿದ್ದು, ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಮಧ್ಯಸ್ಥಗಾರರಿಗೆ ಸೂಕ್ತ ಮಾರ್ಗದರ್ಶನ ನೀಡಿದರೆ ಮಾತ್ರ ಯೋಜನೆ ಯಶಸ್ವಿಯಾಗಲು ಸಾಧ್ಯ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

published on : 26th December 2022

ಝಿಕಾ ವಿರುದ್ಧ ಹೋರಾಡಲು ಸೊಳ್ಳೆಗಳ ಸಂತಾನೋತ್ಪತ್ತಿ ತಾಣಗಳನ್ನು ನಿರ್ಮೂಲನೆಗೊಳಿಸಿ: ತಜ್ಞರು

ರಾಜ್ಯದಲ್ಲಿ ಮೊದಲ ಝಿಕಾ ವೈರಸ್ ಕೇಸ್ ಪತ್ತೆಯಾಗಿದ್ದು, ಝಿಕಾ ವಿರುದ್ಧ ಹೋರಾಡಲು ನಗರದಲ್ಲಿ ಸೊಳ್ಳೆಗಳ ಉತ್ಪತ್ತಿ ತಾಣಗಳನ್ನು ನಿರ್ಮೂಲನೆ ಮಾಡುವಂತೆ ಸಾರ್ವಜನಿಕರಿಗೆ ವೈದ್ಯರು ಸಲಹೆ ನೀಡಿದ್ದಾರೆ.

published on : 19th December 2022

ಬೆಂಗಳೂರು: ‘ಸರ್ಕಾರಿ ಶಾಲೆಗಳ ದತ್ತು ಸ್ವೀಕಾರ ಅಭಿಯಾನ ವಿಫಲ’- ತಜ್ಞರ ಅಭಿಪ್ರಾಯ

ಮೂಲಸೌಕರ್ಯ, ನಿರ್ವಹಣೆ ಮತ್ತು ಶಿಕ್ಷಣದ ಗುಣಮಟ್ಟ ಸುಧಾರಣೆಗಾಗಿ ಕರ್ನಾಟಕ ಸರ್ಕಾರದ ಪರಿಕಲ್ಪನೆಯಾದ 'ಸರ್ಕಾರಿ ಶಾಲೆಗಳ ದತ್ತು ಸ್ವೀಕಾರ ಅಭಿಯಾನ ಶಿಕ್ಷಣ ತಜ್ಞರಿಂದ ಟೀಕೆಗೆ ಗುರಿಯಾಗಿದೆ. ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಫಲತೆ ಮತ್ತು ಜವಾಬ್ದಾರಿಯಿಂದ ನುಣುಚಿಕೊಳ್ಳುವುದಕ್ಕಾಗಿ ಈ ಕ್ರಮ ಎಂದು ಕರೆಯಲಾಗಿದೆ.

published on : 2nd November 2022

ಬೆಂಗಳೂರಿನಲ್ಲಿ ರೆಕಾರ್ಡ್ ಬ್ರೇಕ್ ಮಾಡಿದ ವರುಣ: ಮುಂದಿನ ದಿನಗಳಲ್ಲಿ ಮತ್ತಷ್ಟು ಮಳೆ ಅನಾಹುತ; ತಜ್ಞರ ಎಚ್ಚರಿಕೆ-ಎಚ್ಚೆತ್ತುಕೊಳ್ಳುವುದೇ ಸರ್ಕಾರ?

ಬೆಂಗಳೂರು ನಗರದಲ್ಲಿ ಪ್ರತಿದಿನ ಸುರಿಯುತ್ತಿರುವ ಮಳೆ ಎಲ್ಲಾ ವರ್ಷದ ರೆಕಾರ್ಡ್ ಅಳಿಸಿ ಹಾಕಿ, ಹೊಸ ದಾಖಲೆ ಬರೆದಿದೆ.  ವರ್ಷದಲ್ಲಿ ಇಲ್ಲಿಯ ತನಕ ನಗರದಲ್ಲಿ 170.6 ಸೆಂಟಿಮೀಟರ್ ಮಳೆಯಾಗಿದೆ.

published on : 20th October 2022

ಮಂಕಿಪಾಕ್ಸ್ ರೋಗ ವ್ಯಕ್ತಿಯಲ್ಲಿ ಉಲ್ಬಣಿಸಲು 5 ರಿಂದ 13 ದಿನ ಬೇಕು: ಎಚ್ಚರಿಕೆ ವಹಿಸಲು ತಜ್ಞರ ಸಲಹೆ

ಕೇರಳದಲ್ಲಿ ಮೂರನೇ ಮಂಕಿಪಾಕ್ಸ್ ಪ್ರಕರಣ ಪತ್ತೆಯಾಗಿದ್ದು, ರಾಜ್ಯ ಆರೋಗ್ಯ ಇಲಾಖೆಯು ಮಾರ್ಗಸೂಚಿ ಮತ್ತು ತೀವ್ರ ಕಟ್ಟೆಚ್ಚರಕ್ಕೆ ಮುಂದಾಗಿದೆ. ಮಂಕಿಪಾಕ್ಸ್ ಪತ್ತೆಯಾಗಿ ಅದು ಉಲ್ಭಣಗೊಂಡು ವೈದ್ಯಕೀಯ ಚಿಕಿತ್ಸೆ ಪಡೆಯಲು 5ರಿಂದ 13 ದಿನಗಳನ್ನು ತೆಗೆದುಕೊಳ್ಳುತ್ತದೆ.

published on : 23rd July 2022
1 2 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9