social_icon
  • Tag results for Fire Accident

ಬೆಂಗಳೂರು: ಚಾಮರಾಜಪೇಟೆ ವಿನಾಯಕ ಥಿಯೇಟರ್ ಬಳಿ ಅಗ್ನಿ ಅವಘಡ, 8 ಮನೆ ಬೆಂಕಿಗಾಹುತಿ, ಇಬ್ಬರಿಗೆ ಗಾಯ

ಬೆಂಗಳೂರಿನಲ್ಲಿ ಅಗ್ನಿಅವಘಡವೊಂದು ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆಗೆ 8 ಮನೆಗಳು ಬೆಂಕಿಗಾಹುತಿಯಾಗಿ ಇಬ್ಬರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

published on : 18th September 2023

BBMP ಅಗ್ನಿ ಅವಘಡ: ಮುಖ್ಯ ಎಂಜಿನಿಯರ್ ಸಾವು; 304ಎ ಪ್ರಕರಣ ದಾಖಲಿಸಿದ ಪೊಲೀಸರು!

ಬಿಬಿಎಂಪಿ ಕ್ವಾಲಿಟಿ ಅಶ್ಯೂರೆನ್ಸ್ ಲ್ಯಾಬ್‌ನ ಮುಖ್ಯ ಇಂಜಿನಿಯರ್ ಸಿಎಂ ಶಿವಕುಮಾರ್ ಅವರ ಸಾವಿನ ಹಿನ್ನೆಲೆಯಲ್ಲಿ ಈ ಹಿಂದೆ ಸಂಬಂಧಿತ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದ ಹಲಸೂರು ಗೇಟ್ ಪೊಲೀಸರು ಇದೀಗ ಈ ಪಟ್ಟಿಗೆ ಸೆಕ್ಷನ್ 304 ಎ ಕೂಡ ಸೇರಿಸಿದ್ದಾರೆ. 

published on : 1st September 2023

ಬಿಬಿಎಂಪಿ ಅಗ್ನಿ ಅವಘಡ: ತಾಂತ್ರಿಕ ತನಿಖಾ ವರದಿ ಸಲ್ಲಿಕೆ 15 ದಿನ ವಿಳಂಬ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಪ್ರಧಾನ ಕಚೇರಿ ಅವರಣದಲ್ಲಿನ ಕ್ವಾಲಿಟಿ ಅಶ್ಯೂರೆನ್ಸ್ ಲ್ಯಾಬ್ ಅಗ್ನಿ ಅವಘಡದ ಬಗ್ಗೆ ತನಿಖೆ ನಡೆಸಲು ರಚಿಸಿದ್ದ ತಾಂತ್ರಿಕ ತನಿಖಾ ಸಮಿತಿ ವರದಿ ಸಲ್ಲಿಸುವುದು 15 ದಿನ ತಡವಾಗಲಿದೆ ಎಂದು ಹೇಳಲಾಗಿದೆ.

published on : 1st September 2023

ಹಾವೇರಿ: ಪಟಾಕಿ ಅಂಗಡಿಯಲ್ಲಿ ಬೆಂಕಿ ಅವಘಡ, ಅಗ್ನಿ ಶಾಮಕ ದಳ ದೌಡು, ಮೂವರು ಸಿಬ್ಬಂದಿ ನಾಪತ್ತೆ ಶಂಕೆ!

ಪಟಾಕಿ ಅಂಗಡಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಕೋಟ್ಯಂತರ ಮೌಲ್ಯದ ಪಟಾಕಿ ಸುಟ್ಟು ಕರಕಲಾಗಿರುವ ಘಟನೆ ಹಾವೇರಿಯಲ್ಲಿ ಮಂಗಳವಾರ ನಡೆದಿದೆ.

published on : 29th August 2023

ಮಧುರೈ ಜಂಕ್ಷನ್‌ನಲ್ಲಿ ನಿಂತಿದ್ದ ರೈಲು ಬೋಗಿಗೆ ಬೆಂಕಿ, ಮೂವರು ಮಹಿಳೆಯರು ಸೇರಿ 10 ಮಂದಿ ಸಜೀವ ದಹನ

ಶನಿವಾರ ಮುಂಜಾನೆ ಮಧುರೈ ರೈಲ್ವೆ ಜಂಕ್ಷನ್ ಬಳಿ ನಿಂತಿದ್ದ ಪ್ರವಾಸಿ ಕೋಚ್‌ನಲ್ಲಿ (ಪಾರ್ಟಿ ಕೋಚ್) ಸಂಭವಿಸಿದ ಬೆಂಕಿ ಅವಘಡದಲ್ಲಿ ಮೂವರು ಮಹಿಳೆಯರು ಸೇರಿದಂತೆ ಕನಿಷ್ಠ ಹತ್ತು ಪ್ರಯಾಣಿಕರು ಸಜೀವ ದಹನಗೊಂಡಿದ್ದಾರೆ.

published on : 26th August 2023

ಬಿಬಿಎಂಪಿ ಅಗ್ನಿ ದುರಂತ: ಇಬ್ಬರಿಗೆ ಉಸಿರಾಟದ ತೊಂದರೆ; ತನಿಖೆಗೆ ಕಾಲಾವಕಾಶ ನೀಡಬೇಕು ಎಂದ ತುಷಾರ್ ಗಿರಿನಾಥ್

ಬಿಬಿಎಂಪಿ ಕೇಂದ್ರ ಕಚೇರಿಯ ಗುಣಮಟ್ಟ ನಿಯಂತ್ರಣ ಕೊಠಡಿಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಗಾಯಗೊಂಡ ಇಬ್ಬರು ರೋಗಿಗಳಿಗೆ ಉಸಿರಾಡಲು ಕಷ್ಟವಾದ ಕಾರಣ ನಸಲ್ ಕ್ಯಾತೆಟರ್‌ಗಳನ್ನು (nasal catheter) ಹಾಕಲಾಗಿದೆ. 

published on : 14th August 2023

ತನಿಖೆಯಾಗದೆ ಬಾಕಿ ಬಿಲ್ ಪಾವತಿ ಇಲ್ಲ; ಡಿಸೆಂಬರ್-ಜನವರಿಯಲ್ಲಿ 'ಯುವನಿಧಿ' ಜಾರಿ: ಸಿದ್ದರಾಮಯ್ಯ

ಪ್ರಸಕ್ತ ವರ್ಷ ಪದವಿ, ಡಿಪ್ಲೊಮಾ ಮುಗಿಸಿದ ಇನ್ನು ಆರು ತಿಂಗಳೊಳಗೆ ಕೆಲಸ ಸಿಗದಿರುವ ನಿರುದ್ಯೋಗಿ ಯುವಕ-ಯುವತಿಯರಿಗೆ ರಾಜ್ಯ ಸರ್ಕಾರದಿಂದ ಸಹಾಯ ಧನ ನೀಡುವ ಯುವನಿಧಿ ಯೋಜನೆಯನ್ನು ಡಿಸೆಂಬರ್ ಅಥವಾ ಜನವರಿಯಲ್ಲಿ ಜಾರಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

published on : 12th August 2023

BBMP ಕಚೇರಿಯಲ್ಲಿ ಅಗ್ನಿ ಅವಘಡ: ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಭೇಟಿ, ತನಿಖೆಗೆ ಆದೇಶ

ಬಿಬಿಎಂಪಿ (BBMP) ಕೇಂದ್ರ ಕಚೇರಿ ಆವರಣದಲ್ಲಿ ನಡೆದ ಅಗ್ನಿ ಅವಘಡದಲ್ಲಿ ಗಾಯಗೊಂಡಿದ್ದ ಗಾಯಾಳುಗಳನ್ನು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಆಸ್ಪತ್ರೆಗೆ ಭೇಟಿ ನೀಡಿ ವಿಚಾರಿಸಿದರು.

published on : 12th August 2023

ಬೆಂಗಳೂರಿನ ಜೆಪಿ ನಗರದಲ್ಲಿನ ಒಣ ತ್ಯಾಜ್ಯ ಸಂಗ್ರಹ ಕೇಂದ್ರದಲ್ಲಿ ಬೆಂಕಿ ಅವಘಡ; 10 ಲಕ್ಷ ರೂ. ನಷ್ಟ

ಜೆ.ಪಿ. ನಗರದಲ್ಲಿ ಶನಿವಾರ ಸಂಜೆ ಒಣ ತ್ಯಾಜ್ಯ ಸಂಗ್ರಹಣೆ (ಡಿಡಬ್ಲ್ಯುಸಿಸಿ) ಕೇಂದ್ರದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಪೊಲೀಸರು ತನಿಖೆ ಆರಂಭಿಸಿದ್ದಾರೆ. 

published on : 22nd May 2023

ಬೆಂಗಳೂರು: ನಾಡ ಕಚೇರಿಯಲ್ಲಿ ಬೆಂಕಿ; ನೂರಾರು ದಾಖಲೆಗಳು ಬೆಂಕಿಗಾಹುತಿ, ಪೊಲೀಸ್ ದೂರು ದಾಖಲು

ಬೆಂಗಳೂರಿನಲ್ಲಿ ನಾಡ ಕಚೇರಿಯಲ್ಲಿ ಬೆಂಕಿ ಅನಾಹುತ ಸಂಭವಿಸಿದ್ದು, ನೂರಾರು ದಾಖಲೆಗಳು ಬೆಂಕಿಗಾಹುತಿಯಾಗಿದೆ.

published on : 30th April 2023

ದೆಹಲಿಯ ಆದಾಯ ತೆರಿಗೆ ಕಚೇರಿ ಬಳಿಯ ವಿಕಾಸ್ ಭವನದಲ್ಲಿ ಬೆಂಕಿ ಅವಘಡ

ರಾಷ್ಟ್ರ ರಾಜಧಾನಿಯ ಆದಾಯ ತೆರಿಗೆ ಕಚೇರಿ ಬಳಿಯ ವಿಕಾಸ ಭವನದಲ್ಲಿ ಶನಿವಾರ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಾಲ್ಕು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ. ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಯುತ್ತಿದೆ. 

published on : 22nd April 2023

ದುಬೈ: ವಸತಿ ಸಂಕೀರ್ಣದಲ್ಲಿ ಭೀಕರ ಅಗ್ನಿ ಅವಘಡ; 4 ಮಂದಿ ಭಾರತೀಯರು ಸೇರಿ 16 ಮಂದಿ ಸಾವು

ದುಬೈನ ವಸತಿ ಸಂಕೀರ್ಣ ಕಟ್ಟಡವೊಂದರಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಲ್ಲಿ 4 ಮಂದಿ ಭಾರತೀಯರು ಸೇರಿದಂತೆ 16 ಮಂದಿ ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ.

published on : 16th April 2023

ಕೇರಳದ ರೈಲಿನಲ್ಲಿ ಸಹ ಪ್ರಯಾಣಿಕರಿಗೆ ಬೆಂಕಿ ಹಚ್ಚಿದ ವ್ಯಕ್ತಿ: ಮಹಾರಾಷ್ಟ್ರದಲ್ಲಿ ಶಂಕಿತನ ಬಂಧನ

ಕೇಂದ್ರ ಗುಪ್ತಚರ ಮತ್ತು ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಜಂಟಿ ತಂಡವು ಬುಧವಾರ ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯಿಂದ ಕೇರಳ ರೈಲಿನಲ್ಲಿ ಬೆಂಕಿ ಹಚ್ಚಿದ ಘಟನೆಯಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದೆ.

published on : 5th April 2023

ಸೊಳ್ಳೆ ಬತ್ತಿಯಿಂದ ಬೆಂಕಿ ಹೊತ್ತಿಕೊಂಡು ಒಂದೂವರೆ ವರ್ಷದ ಮಗು ಸೇರಿ ಆರು ಮಂದಿ ಸಾವು

ಈಶಾನ್ಯ ದೆಹಲಿಯ ಶಾಸ್ತ್ರಿ ಪಾರ್ಕ್‌ನಲ್ಲಿರುವ ಮನೆಯೊಂದರಲ್ಲಿ ಸೊಳ್ಳೆ ಕಾಯಿಲ್ ಉರುಳಿದ ಪರಿಣಾಮ ಬೆಂಕಿ ಕಾಣಿಸಿಕೊಂಡಿದ್ದರಿಂದ ಉಸಿರುಗಟ್ಟಿ ಹಸುಗೂಸು ಸೇರಿದಂತೆ ಆರು ಜನರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

published on : 31st March 2023

ಬೆಂಗಳೂರು: ಬಸ್ ನಲ್ಲಿ ಕಂಡಕ್ಟರ್ ಸಾವು ಪ್ರಕರಣಕ್ಕೆ ಟ್ವಿಸ್ಟ್; ಆತ್ಮಹತ್ಯೆ ಶಂಕೆ ವ್ಯಕ್ತಪಡಿಸಿದ ಪೊಲೀಸರು; ಮುಂದುವರಿದ ತನಿಖೆ

ಬ್ಯಾಡರಹಳ್ಳಿ ಬಿಎಂಟಿಸಿ ಬಸ್‌ನಲ್ಲಿ ಮಲಗಿದ್ದಾಗ 43 ವರ್ಷದ ಬಸ್ ಕಂಡಕ್ಟರ್ ಮುತ್ತಯ್ಯ ಸುಟ್ಟು ಕರಕಲಾದ ಎರಡು ವಾರಗಳ ನಂತರ, ಆತ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

published on : 25th March 2023
1 2 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9