social_icon
  • Tag results for Flood

ಹಿಮಾಚಲ ಪ್ರದೇಶ ಪ್ರವಾಹವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ: ಪ್ರಧಾನಿ ಮೋದಿಗೆ ಪ್ರಿಯಾಂಕಾ ವಾದ್ರಾ ಪತ್ರ

2013ರ ಕೇದಾರನಾಥ ದುರಂತದಂತೆಯೇ ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಉಂಟಾದ ವಿನಾಶವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದಾರೆ.

published on : 15th September 2023

ಲಿಬಿಯಾದಲ್ಲಿ ಭೀಕರ ಪ್ರವಾಹ: 5 ಸಾವಿರ ಮಂದಿ ಸಾವು, 10 ಸಾವಿರ ಮಂದಿ ನಾಪತ್ತೆ, ಭಾರತ ಸಂತಾಪ

ಲಿಬಿಯಾದಲ್ಲಿ ಸಂಭವಿಸಿದ ಭೀಕರ ಪ್ರವಾಹದಲ್ಲಿ ಕನಿಷ್ಟ 5 ಸಾವಿರ ಮಂದಿ ಸಾವಿಗೀಡಾಗಿದ್ದು, 10 ಸಾವಿರಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

published on : 14th September 2023

ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆಗೆ ಐವರು ಬಲಿ; ಪಂಜಾಬ್‌ನಲ್ಲಿ ಹೈ ಅಲರ್ಟ್ ಘೋಷಣೆ

ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೂಕುಸಿತ ಮತ್ತು ಮೇಘಸ್ಫೋಟದ ಪ್ರತ್ಯೇಕ ಘಟನೆಗಳಲ್ಲಿ ಕನಿಷ್ಠ ಐವರು ಸಾವಿಗೀಡಾಗಿದ್ದಾರೆ ಮತ್ತು ಇಬ್ಬರು ನಾಪತ್ತೆಯಾಗಿದ್ದಾರೆ. ಹಠಾತ್ ಪ್ರವಾಹದಿಂದಾಗಿ ಕೆಲವರು ಸಿಲುಕಿಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

published on : 24th August 2023

ಪ್ರವಾಹದಿಂದ ತತ್ತರಿಸಿದ ಹಿಮಾಚಲ ಪ್ರದೇಶಕ್ಕೆ ಕರ್ನಾಟಕ ನೆರವು: 15 ಕೋಟಿ ರೂ. ಬಿಡುಗಡೆಗೆ ಸಿಎಂ ಸಿದ್ದರಾಮಯ್ಯ ಆದೇಶ

ಪ್ರವಾಹ ಹಾಗೂ ಭೂ ಕುಸಿತದಿಂದ ತತ್ತರಿಸಿರುವ ಹಿಮಾಚಲ ಪ್ರದೇಶಕ್ಕೆ ಕರ್ನಾಟಕ ಆರ್ಥಿಕ ನೆರವು ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆದೇಶದಂತೆ 15 ಕೋಟಿ ರೂಪಾಯಿಯನ್ನು ಹಣಕಾಸು ಇಲಾಖೆ ಹಣ ಬಿಡುಗಡೆ ಮಾಡಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. 

published on : 21st August 2023

ಹಿಮಾಚಲ ಪ್ರದೇಶ ಪ್ರವಾಹ: 250ಕ್ಕೂ ಹೆಚ್ಚು ಜನರ ಸಾವಿನ ನಂತರ ಎಚ್ಚೆತ್ತ ಸರ್ಕಾರ, ರಸ್ತೆ ನಿರ್ಮಾಣ ನಿಯಮದಲ್ಲಿ ಬದಲಾವಣೆ

ಹಿಮಾಚಲ ಪ್ರದೇಶದಲ್ಲಿ ಸಂಭವಿಸಿದ ಪ್ರವಾಹದಲ್ಲಿ 250ಕ್ಕೂ ಮಂದಿ ಸಾವನ್ನಪ್ಪಿದ್ದ ನಂತರ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ನಿಯಮಗಳನ್ನು ರಸ್ತೆ ನಿರ್ಮಾಣದಲ್ಲಿ ನಿಯಮಗಳನ್ನು ಬದಲಾಯಿಸಿದ್ದಾರೆ. ರಾಜ್ಯದ ಎಲ್ಲಾ ರಸ್ತೆಗಳಿಗೆ ಸರಿಯಾದ ಒಳಚರಂಡಿ ಮತ್ತು ಅಡ್ಡ ಚರಂಡಿ ವ್ಯವಸ್ಥೆಯನ್ನು ಕಡ್ಡಾಯಗೊಳಿಸಲಾಗುವುದು ಎಂದು ಅವರು ಶುಕ್ರವಾರ ಹೇಳಿದ್ದಾರೆ.

published on : 18th August 2023

ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ: ಭಾರೀ ಮಳೆ ಪ್ರವಾಹಕ್ಕೆ ಭೂಕುಸಿತ, 7 ಮಂದಿ ಸಾವು

ಕಂದಘಾಟ್‌ ವಿಭಾಗದ ಜಡೋನ್‌ ಗ್ರಾಮದಲ್ಲಿ ಮೇಘಸ್ಫೋಟ ಸಂಭವಿಸಿದ್ದು, ಕೆಲವೆಡೆ ಭೂಕುಸಿತ ಸಂಭವಿಸಿದೆ. ಇನ್ನು ಪ್ರವಾಹದ ಅಬ್ಬರಕ್ಕೆ ಎರಡು ಮನೆಗಳು, ಹತ್ತಾರು ವಾಹನಗಳು ಕೊಚ್ಚಿಹೋಗಿವೆ. ಕಳೆದ 24 ಗಂಟೆಗಳಲ್ಲಿ ಹಿಮಾಚಲ ಪ್ರದೇಶದ ಬಹುತೇಕ ಭಾಗಗಳಲ್ಲಿ ಭಾರಿ ಮಳೆಯಾಗಿದ್ದು, ರಸ್ತೆಗಳು, ಕಟ್ಟಡಗಳು ಕೂಡ ಕೊಚ್ಚಿಹೋಗಿವೆ.

published on : 14th August 2023

ರಾಜ್ಯದಲ್ಲಿ ಮಳೆ ಹಾನಿ, ಪರಿಹಾರದ ಬಗ್ಗೆ ಸಿದ್ದು ಸರ್ಕಾರ ನಿರ್ಲಕ್ಷ್ಯ: ಬಸವರಾಜ ಬೊಮ್ಮಾಯಿ ವಾಗ್ದಾಳಿ

ರಾಜ್ಯದಲ್ಲಿನ ಮಳೆ, ಪ್ರವಾಹ ಪರಿಸ್ಥಿತಿ ಹಾಗೂ ಸಂತ್ರಸ್ತರಿಗೆ ಪರಿಹಾರ ನೀಡುವಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ. 

published on : 30th July 2023

ಹವಾಮಾನ ಬದಲಾವಣೆ: 2022 ರಲ್ಲಿ ಭಾರತಕ್ಕೆ ಗಣನೀಯ ಆರ್ಥಿಕ ನಷ್ಟ

ಕಳೆದ ವರ್ಷ 2022ರಲ್ಲಿ ಪ್ರವಾಹ, ಬರ ಮತ್ತು ಶಾಖದ ಅಲೆ-ಸಂಬಂಧಿತ ವಿಪತ್ತುಗಳಿಂದಾಗಿ ದೇಶ ಸಾಕಷ್ಟು ನಷ್ಟ ಅನುಭವಿಸಿತ್ತು. ವಿಶ್ವ ಹವಾಮಾನ ಸಂಸ್ಥೆ ಪ್ರಕಟಿಸಿದ ಹೊಸ ವರದಿ ಪ್ರಕಾರ, ಬರ ಮತ್ತು ಶಾಖದ ಅಲೆಗಳ ನಂತರದ ಪ್ರವಾಹಕ್ಕೆ ಸಂಬಂಧಿಸಿದ ವಿಪತ್ತುಗಳಿಂದ ಭಾರತವು 4.2 ಶತಕೋಟಿ ಡಾಲರ್ ನಷ್ಟ ಅನುಭವಿಸಿದೆ.

published on : 27th July 2023

ಪರಿಸ್ಥಿತಿ ಕೈಮೀರಿ ಹೋಗಿಲ್ಲ, ಸಮಸ್ಯೆ ಎದುರಿಸಲು ಸರ್ಕಾರ ಸನ್ನದ್ಧ; ಜುಲೈ 31ರಿಂದ ಮಳೆಪೀಡಿತ ಜಿಲ್ಲೆಗಳಿಗೆ ಭೇಟಿ: ಸಿಎಂ ಸಿದ್ದರಾಮಯ್ಯ

ರಾಜ್ಯಾದ್ಯಂತ ಮಳೆ ಉತ್ತಮವಾಗಿ ಸುರಿಯುತ್ತಿದೆ. ಹಲವು ಕಡೆ ಪ್ರಕೃತಿ ವಿಕೋಪಗಳು ವರದಿಯಾಗಿವೆ. ಜುಲೈ 31ರಿಂದ ಮಳೆಪೀಡಿತ ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

published on : 26th July 2023

ಹಲವು ಜಿಲ್ಲೆಗಳಲ್ಲಿ ಪ್ರವಾಹ, ಕೆಲವೆಡೆ ಬರಗಾಲ: ಡಿಸಿ, ಜಿ.ಪಂ ಸಿಇಒಗಳ ಜೊತೆ ಇಂದು ಸಂಜೆ ಸಿಎಂ ಸಿದ್ದರಾಮಯ್ಯ ವಿಡಿಯೊ ಸಂವಾದ

ಜೂನ್ ತಿಂಗಳಲ್ಲಿ ಮುಂಗಾರು ಮಳೆ ವಿಳಂಬವಾಗಿ ಈಗ ಜುಲೈ ತಿಂಗಳಲ್ಲಿ ಮಳೆ ಸತತವಾಗಿ ಸುರಿಯುತ್ತಿದೆ. ಹಲವು ಜಿಲ್ಲೆಗಳಲ್ಲಿ ಪ್ರಕೃತಿ ವಿಕೋಪ, ಪ್ರವಾಹಗಳು ಉಂಟಾಗಿವೆ. 

published on : 26th July 2023

ಕೊಡಗು ಜಿಲ್ಲೆಯ ಹಲವು ಭಾಗಗಳಲ್ಲಿ ಭಾರೀ ಮಳೆ: ಜಲಾವೃತ, ಹಾನಿ

ಕೊಡಗು ಜಿಲ್ಲೆಯ ಕಾವೇರಿ ನದಿಯ ಜಲಾನಯನ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದೆ. ಜೋರಾದ ಗಾಳಿ ಸಹಿತ ಮಳೆಯಿಂದಾಗಿ ಜಿಲ್ಲೆಯಾದ್ಯಂತ ಹಲವು ಪ್ರಕೃತಿ ವಿಕೋಪ ಘಟನೆಗಳು, ಆಸ್ತಿಪಾಸ್ತಿಗಳ ಹಾನಿ ವರದಿಯಾಗಿದೆ. 

published on : 24th July 2023

ಮಳೆ ಪ್ರವಾಹ: ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ಗ್ರಾಮಕ್ಕೆ ಸಂಪರ್ಕ ಕಡಿತ; ರೋಗಿಗಳನ್ನು ತೆಪ್ಪದಲ್ಲಿ ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು!

ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಕಾಳಿ ಹುಲಿ ಸಂರಕ್ಷಿತ ಪ್ರದೇಶದ ಒಳ ಗ್ರಾಮಗಳಲ್ಲಿ ವಾಸಿಸುತ್ತಿರುವ ಜನರ ಪರಿಸ್ಥಿತಿ ದಯನೀಯವಾಗಿದೆ.

published on : 24th July 2023

ಮಹಾರಾಷ್ಟ್ರ: ಪ್ರವಾಹದಲ್ಲಿ ಸಿಲುಕಿರುವ 45 ಜನರನ್ನು ರಕ್ಷಿಸಲು ವಾಯುಪಡೆ ಕಾರ್ಯಾಚರಣೆ

ಮಹಾರಾಷ್ಟ್ರದ ಯವತ್ಮಾಲ್ ಜಿಲ್ಲೆಯ ಮಹಾಗಾಂವ್ ತಾಲೂಕಿನಲ್ಲಿ ಭಾರೀ ಮಳೆಯ ನಡುವೆ ಪ್ರವಾಹದಲ್ಲಿ ಸಿಲುಕಿರುವ 45 ಜನರನ್ನು ರಕ್ಷಿಸಲು ಭಾರತೀಯ ವಾಯುಪಡೆಯ ಎರಡು ಹೆಲಿಕಾಪ್ಟರ್‌ಗಳು ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

published on : 22nd July 2023

ಪ್ರವಾಹ ಪೀಡಿತ ಪಂಜಾಬ್, ಹರ್ಯಾಣದಲ್ಲಿ ಸಾವಿನ ಸಂಖ್ಯೆ 62ಕ್ಕೆ ಏರಿಕೆ!

ಪ್ರವಾಹ ಪೀಡಿತ ರಾಜ್ಯಗಳಾದ ಪಂಜಾಬ್ ಹಾಗೂ ಹರ್ಯಾಣಗಳಲ್ಲಿ ಸಾವಿನ ಸಂಖ್ಯೆ 62ಕ್ಕೆ ಏರಿಕೆಯಾಗಿದೆ.

published on : 17th July 2023

ದೆಹಲಿ: ಪ್ರವಾಹ ಪರಿಸ್ಥಿತಿ ಎದುರಿಸಲು ಕೈಗೊಂಡ ಕ್ರಮಗಳ ಕುರಿತು ಎಲ್‌ಜಿ ಜೊತೆಗೆ ಪ್ರಧಾನಿ ಮೋದಿ ಮಾತುಕತೆ

ಫ್ರಾನ್ಸ್ ಮತ್ತು ಯುಎಇ ಪ್ರವಾಸಕ್ಕೆ ತೆರಳಿದ್ದ ಪ್ರಧಾನಿ ಮೋದಿ ಭಾರತಕ್ಕೆ ವಾಪಸ್ಸಾಗಿದ್ದಾರೆ. ದೆಹಲಿಗೆ ಮರಳಿದ ತಕ್ಷಣವೇ ಪ್ರಧಾನಿ ನರೇಂದ್ರ ಮೋದಿಯವರು ಶನಿವಾರ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರೊಂದಿಗೆ ಮಾತನಾಡಿದರು. 

published on : 16th July 2023
1 2 3 4 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9